ಕುಂದಲ್ ಚಂದ್ರಾವತ್, ಪಿಣರಾಯ್ ವಿಜಯನ್ 
ಪ್ರಧಾನ ಸುದ್ದಿ

ಕೇರಳ ಸಿಎಂ ತಲೆಗೆ 1 ಕೋಟಿ ರು. ಬಹುಮಾನ, ಹೇಳಿಕೆ ಹಿಂಪಡೆದ ಆರ್ ಎಸ್ ಎಸ್ ಮುಖಂಡ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ತಲೆ ತೆಗೆದರೆ ಒಂದು ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿ,....

ಉಜ್ಜೈನಿ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ತಲೆ ತೆಗೆದರೆ ಒಂದು ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿ, ತೀವ್ರ ವಿವಾದಕ್ಕಿಡಾಗಿದ್ದ ಆರ್ ಎಸ್ ಎಸ್ ಮುಖಂಡ ಕುಂದನ್ ಚಂದ್ರಾವತ್ ಅವರು ಶುಕ್ರವಾರ ತಮ್ಮ ಹೇಳಿಕೆ ಹಿಂಪಡೆದಿದ್ದಾರೆ.
ಆರ್ ಎಸ್ಎಸ್ ಒತ್ತಡಕ್ಕೆ ಮಣಿದು ಕುಂದನ್ ಅವರು ಬಹಿರಂಗ ಸಭೆಯಲ್ಲಿ ತಾವು ನೀಡಿದ್ದ ಹೇಳಿಕೆಯನ್ನು ಹಿಂಪಡೆದಿರುವುದಾಗಿ ಹೇಳಿ, ವಿಷಾದ ವ್ಯಕ್ತಪಡಿಸಿದ್ದಾರೆ.
'ನನಗೆ ಕೇರಳದಿಂದ ಕೊಲೆ ಬೆದರಿಕೆ ಕರೆಗಳು ಬಂದಿದ್ದವು ಮತ್ತು ಸ್ವಯಂ ಸೇವಕರ ಹತ್ಯೆ ಪ್ರಕರಣದ ನೋವಿನಿಂದ ನಾನು ಉಜ್ಜೈನಿಯ ಸಭೆಯಲ್ಲಿ ಮಾತನಾಡುವಾಗ ಭಾವೋದ್ವೇಗಕ್ಕೆ ಒಳಗಾಗಿ ಕೇರಳ ಸಿಎಂ ತಲೆ ತೆಗೆದರೆ ಒಂದು ಕೋಟಿ ನೀಡುವುದಾಗಿ ಹೇಳಿಕೆ ನೀಡಿದ್ದೆ. ಆದರೆ ಈಗ ಆ ಹೇಳೆಕೆಯನ್ನು ವಾಪಸ್ ಪಡೆಯುತ್ತಿದ್ದೇನೆ ಮತ್ತು ಹೇಳಿಕೆಗೆ ವಿಷಾದ ವ್ಯಕ್ತಪಡಿಸುವುದಾಗಿ' ಆರ್ ಎಸ್ಎಸ್ ಸಹ ಪ್ರಚಾರ ಪ್ರಮುಖ್ ಕುಂದನ್ ಚಂದ್ರಾವತ್ ಅವರು ತಿಳಿಸಿದ್ದಾರೆ. 
ಚಂದ್ರಾವತ್ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಆರ್ ಎಸ್ಎಸ್ ಕೂಡಾ ಇದು ನಮ್ಮ ಸಂಸ್ಕೃತಿ ಅಲ್ಲ. ಹಾಗಾಗಿ ಆ ಹೇಳಿಕೆಗೆ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು, ಭಾರತದಿಂದ ನೆರವು

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video