ಮಕ್ಕಳ ಕಳ್ಳ ಸಾಗಾಣೆ ಪ್ರಕರಣದಲ್ಲಿ ಬಂಧಗೊಂಡಿದ್ದ ಬಿಜೆಪಿ ನಾಯಕಿ ಜೂಹಿ ಚೌಧರಿ 
ಪ್ರಧಾನ ಸುದ್ದಿ

ಮಕ್ಕಳ ಕಳ್ಳ ಸಾಗಾಣೆ ಪ್ರಕರಣ; ಪಶ್ಚಿಮ ಬಂಗಾಳದಲ್ಲಿ ಮಕ್ಕಳ ರಕ್ಷಣಾ ಅಧಿಕಾರಿ ಬಂಧನ

ದಾರ್ಜಿಲಿಂಗ್ ನಲ್ಲಿ ಮಕ್ಕಳ ರಕ್ಷಣಾ ಏಜೆನ್ಸಿಯ ಅಧ್ಯಕ್ಷೆ ಮತ್ತು ಮಕ್ಕಳ ಅಭಿವೃದ್ಧಿ ಸಮಿತಿಯ ಸದಸ್ಯೆಯನ್ನು, ಹಸುಗೂಸುಗಳು ಮತ್ತು ಸಣ್ಣ ಮಕ್ಕಳನ್ನು ವಿದೇಶಿಯರಿಗೆ ಮಾರುವ ಆರೋಪದಲ್ಲಿ

ಜಲಪೈಗುರಿ: ದಾರ್ಜಿಲಿಂಗ್ ನಲ್ಲಿ ಮಕ್ಕಳ ರಕ್ಷಣಾ ಏಜೆನ್ಸಿಯ ಅಧ್ಯಕ್ಷೆ ಮತ್ತು ಮಕ್ಕಳ ಅಭಿವೃದ್ಧಿ ಸಮಿತಿಯ ಸದಸ್ಯೆಯನ್ನು, ಹಸುಗೂಸುಗಳು ಮತ್ತು ಸಣ್ಣ ಮಕ್ಕಳನ್ನು ವಿದೇಶಿಯರಿಗೆ ಮಾರುವ ಆರೋಪದಲ್ಲಿ ಸಿಐಡಿ ಬಂಧಿಸಿದೆ ಎಂದು ಪೊಲೀಸರು ಹೇಳಿದ್ದಾರೆ. 
ದಾರ್ಜಿಲಿಂಗ್ ಜಿಲ್ಲೆಯ ಮಕ್ಕಳ ರಕ್ಷಣಾ ಅಧಿಕಾರಿ ಮೃಣಾಲ್ ಘೋಷ್ ಮತ್ತು ಜಿಲ್ಲಾ ಮಕ್ಕಳ ಅಭಿವೃದ್ಧಿ ಸಮಿತಿಯ ಸದಸ್ಯೆ ದೇಬಶಿಶ್ ಚಂದ್ರ ಅವರನ್ನು ಮೊದಲು ನೆನ್ನೆ ಸಿಲಿಗುರಿ ಜಿಲ್ಲೆಯ ಪಿಂಟೈಲ್ ಗ್ರಾಮದಲ್ಲಿ ಪ್ರಶ್ನೆಗೆ ಒಳಪಡಿಸಿ ನಂತರ ಬಂಧಿಸಲಾಗಿದೆ. 
ಜಲಪೈಗುರಿ ಪಟ್ಟಣದಲ್ಲಿ ಮಕ್ಕಳ ರಕ್ಷಣಾ ತಾಣ 'ಬಿಮಲ ಶಿಶು ಗ್ರಿಹೋ'ದಿಂದ ಅನಧಿಕೃತ ದತ್ತು ನೀಡುವ ಹಗರಣದ ಬಗ್ಗೆ ತನಿಖೆ ತೀವ್ರಗೊಂಡಿದ್ದು ಈ ಬಂಧನಗಳನ್ನು ಮಾಡಲಾಗಿದೆ. 
ಈ ಹಿಂದೆ ಇದೆ ಪ್ರಕರಣದಲ್ಲಿ ಬಿಜೆಪಿ ಮಹಿಳಾ ಘಟಕಿಯ ನಾಯಕಿ ಜೂಹಿ ಚೌಧರಿ ಮತ್ತು ಇತರ ಮೂವರನ್ನು ಬಂಧಿಸಲಾಗಿತ್ತು. ಅಲ್ಲಿನ ದತ್ತು ಅಧಿಕಾರಿ ಸೋನಾಲಿ ಮೊಂಡಲ್, ನಿರ್ದೇಶಕಿ ಚಂದನ ಚಕ್ರವರ್ತಿ ಮತ್ತು ಅವರ ಸಹೋದರ ಮಾನಸ್ ಭೌಮಿಕ್ ಕೂಡ ಬಂಧನಗೊಂಡಿದ್ದರು. 
ಒಂದರಿಂದ ೧೪ ವರ್ಷದ ಮಕ್ಕಳನ್ನು 'ದತ್ತು ನೀಡುವ ಹಗರಣದಲ್ಲಿ' ವಿದೇಶಿಯರಿಗೆ ಮಕ್ಕಳನ್ನು ಅನಧಿಕೃತವಾಗಿ ಮಾರಿರುವ ಆರೋಪವನ್ನು ಇವರ ವಿರುದ್ಧ ಹೊರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT