ಕಾರ್ಯಾಚರಣೆ ನಡೆದ ಮನೆ 
ಪ್ರಧಾನ ಸುದ್ದಿ

ಶಂಕಿತ ಉಗ್ರನ ಹೊಡೆದುರುಳಿಸಿದ ಎಟಿಎಸ್; ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

ಉತ್ತರ ಪ್ರದೇಶದ ಠಾಕೂರ್‌ಗಂಜ್ ನಲ್ಲಿ ಮನೆಯೊಂದರಲ್ಲಿ ಅಡಗಿ ಕುಳಿತಿದ್ದ ಶಂಕಿತ ಉಗ್ರನ ವಿರುದ್ಧ ಭಯೋತ್ಪಾದನೆ ನಿಗ್ರಹ ದಳದ ಸೈನಿಕರು ನಡೆಸುತ್ತಿದ್ದ ಕಾರ್ಯಾಚರಣೆ ಅಂತ್ಯಗೊಂಡಿದೆ...

ಲಖನೌ: ಉತ್ತರ ಪ್ರದೇಶದ ಠಾಕೂರ್‌ಗಂಜ್ ನಲ್ಲಿ ಮನೆಯೊಂದರಲ್ಲಿ ಅಡಗಿ ಕುಳಿತಿದ್ದ ಶಂಕಿತ ಉಗ್ರನ ವಿರುದ್ಧ ಭಯೋತ್ಪಾದನೆ ನಿಗ್ರಹ ದಳದ ಸೈನಿಕರು ನಡೆಸುತ್ತಿದ್ದ ಕಾರ್ಯಾಚರಣೆ ಅಂತ್ಯವಾಗಿದ್ದು, ಸತತ 10 ಗಂಟೆಗಳ  ಕಾರ್ಯಾಚರಣೆ ಬಳಿಕ ಶಂಕಿತ ಉಗ್ರನನ್ನು ಹೊಡೆದುರುಳಿಸುವಲ್ಲಿ ಸೈನಿಕರು ಯಶಸ್ವಿಯಾಗಿದ್ದಾರೆ.

ರಾಜಧಾನಿ ಲಖನೌನಿಂದ ಹೊರವಲಯದಲ್ಲಿರುವ ಠಾಕೂರ್ ಗಂಜ್ ಮನೆಯೊಂದರಲ್ಲಿ ಅಡಗಿ ಕುಳಿತು ದಾಳಿ ಮಾಡುತ್ತಿದ್ದ ಶಂಕಿತ ಉಗ್ರನನ್ನು ಸೈಪುಲ್ಲಾ ಎಂದು ಗುರುತಿಸಲಾಗಿದ್ದು, ಅಡಗಿ ಕುಳಿತಿದ್ದ ಶಂಕಿತ ಉಗ್ರ ಸೈಪುಲ್ಲಾ  ಎಂಬಾತ ಶರಣಾಗಲು ಒಪ್ಪದೆ ಗುಂಡಿನ ಚಕಮಕಿಯಲ್ಲಿ ನಿರತನಾಗಿದ್ದ. ಹೀಗಾಗಿ ಆತನ ವಿರುದ್ಧ ಕಾರ್ಯಾಚರಣೆ ಕೈಗೊಂಡಿದ್ದ ಎಟಿಎಸ್ ರಾತ್ರಿ ವೇಳೆಗೆ ಹೊಡೆದುರುಳಿಸಿದೆ. ಸೈಪುಲ್ಲಾ ಸುಮಾರು 8 ಗಂಟೆಗಳ ಕಾಲ ಗುಂಡಿನ ದಾಳಿ  ನಡೆಸಿ ಸೈನಿಕರಿಗೆ ಬೆದರಿಕೆ ಹಾಕುತ್ತಿದ್ದ.

ಉಗ್ರ ಸೈಫುಲ್ಲಾ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಗೆ ಸೇರಿದ ಉಗ್ರಗಾಮಿ ಆಗಿರಬಹುದು ಎಂದು ಶಂಕಿಸಲಾಗುತ್ತಿದ್ದು, ಇಸಿಸ್ ಗೆ ಸೇರಿದ ಬಾವುಟ ಕೂಡ ಕೊಠಡಿಯಲ್ಲಿ ಪತ್ತೆಯಾಗಿದೆ.

ಅಪಾರ ಪ್ರಮಾಣ ಮದ್ದು-ಗುಂಡು, ಶಸ್ತ್ರಾಸ್ತ್ರ ಪತ್ತೆ
ಇನ್ನು ಉಗ್ರ ಸೈಫುಲ್ಲಾ ಅವಿತು ಕುಳಿತಿದ್ದ ಮನೆಯಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಪಿಸ್ತೂಲು, ರಿವಾಲ್ವರ್, ಚಾಕುಗಳು, ಅಪಾರ ಸುತ್ತಿನ ಗುಂಡುಗಳು, ಬಾಂಬ್ ತಯಾರಿಕೆಯಲ್ಲಿ  ಬಳಸಲಾಗುವ ಟೈಮರ್ ಮತ್ತು ಯಂತ್ರೋಪಕರಣಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ ಈ ಎಲ್ಲ ವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಸ್ಥಳದಲ್ಲಿ ದೊರೆತ ಪಾಸ್ ಪೋರ್ಟ್ ಮತ್ತು ಇತರೆ  ವಸ್ತುಗಳ ಆಧಾರದ ಮೇಲೆ ಆತನ ಸ್ನೇಹಿತರ ಕುರಿತಂತೆ ತನಿಖೆ ಆರಂಭಿಸಿದ್ದಾರೆ. ಅಂತೆಯೇ ಸ್ಥಳದಲ್ಲಿ ಹಲವು ಮೊಬೈಲ್ ಗಳು ಪತ್ತೆಯಾಗಿದ್ದು, ಇವುಗಳಲ್ಲಿ ಮಾಹಿತಿಯನ್ನಾಧರಿಸಿ ತನಿಖೆ ನಡೆಸಲಾಗುತ್ತಿದೆ ಎಂದು  ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT