ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಒ ಪನ್ನೀರ್ಸೆಲ್ವಂ 
ಪ್ರಧಾನ ಸುದ್ದಿ

ಜಯಲಲಿತಾ ಸಾವಿನ ತನಿಖೆಗೆ ಆಗ್ರಹಿಸಿ ಪನ್ನೀರ್ಸೆಲ್ವಂ ಉಪವಾಸ ಧರಣಿ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಮಾಜಿ ಮುಖ್ಯಮಂತ್ರಿ ಒ ಪನ್ನೀರ್ಸೆಲ್ವಂ ಮತ್ತು ಬೆಂಬಲಿಗರು ಬುಧವಾರ

ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಮಾಜಿ ಮುಖ್ಯಮಂತ್ರಿ ಒ ಪನ್ನೀರ್ಸೆಲ್ವಂ ಮತ್ತು ಬೆಂಬಲಿಗರು ಬುಧವಾರ ಒಂದು ದಿನದ ಉಪವಾಸ ಧರಣಿಗೆ ಮುಂದಾಗಿದ್ದಾರೆ. 
ತಮಿಳುನಾಡು, ಪುದುಚೆರಿ ಮತ್ತು ಕರೈಕಲ್ ನ ಎಲ್ಲ ಜಿಲ್ಲಾ ಮುಖ್ಯ ಘಟಕಗಳಲ್ಲಿ ಉಪವಾಸ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. 
ಬೆಳಗ್ಗೆ ೯ ಘಂಟೆಯಿಂದ ಸಂಜೆ ೫ ಘಂಟೆಯವರೆಗೆ ಈ ಉಪವಾಸ ಧರಣಿ ಜಾರಿಯಲ್ಲಿರಲಿದೆ. 
ಪನ್ನೀರ್ಸೆಲ್ವಂ ಬಣಕ್ಕೆ ಸೇರಿದ ಎಐಡಿಎಂಕೆ ಸಂಸದರು ಮತ್ತು ಶಾಸಕರು ಕೂಡ ಈ ಪ್ರತಿಭನೆಯಲ್ಲಿ ಭಾಗಿಯಾಗಲಿದ್ದಾರೆ. 
ಚೆನೈನ ಅಪೋಲೋ ಆಸ್ಪತ್ರೆಯಲ್ಲಿ ೭೫ ದಿನಗಳ ಕಾಲ ದಾಖಲಾಗಿದ್ದ ಜಯಲಲಿತಾ ಕಳೆದ ವರ್ಷ ಡಿಸೆಂಬರ್ ನಲ್ಲಿ ಕೊನೆಯುಸಿರೆಳೆದಿದ್ದರು. ಜಯಲಲಿತಾ ಸಾವಿನ ಸುತ್ತ ನಿಗೂಢಗಳಿವೆ ಎಂದು ಪನ್ನೀರ್ಸೆಲ್ವಂ ಬಣದ ಸದಸ್ಯರು ಸಂದೇಹ ವ್ಯಕ್ತಪಡಿಸಿದ್ದಾರೆ. 
ಮಾರ್ಚ್ ೬ ರಂದು ಜಯಲಲಿತಾ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿದ ದಾಖಲೆಗಳನ್ನು ಸಾರ್ವಜನಿಕಗೊಳಿಸಿರುವ ತಮಿಳುನಾಡು ಸರ್ಕಾರ, ಅಮ್ಮ ಅವರಿಗೆ ಅಗತ್ಯವಿದ್ದ ಅತ್ಯುತ್ತಮ ಚಿಕಿತ್ಸೆ ದೊರಕಿದೆ ಎಂದು ತಿಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT