ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಒ ಪನ್ನೀರ್ಸೆಲ್ವಂ 
ಪ್ರಧಾನ ಸುದ್ದಿ

ಜಯಲಲಿತಾ ಸಾವಿನ ತನಿಖೆಗೆ ಆಗ್ರಹಿಸಿ ಪನ್ನೀರ್ಸೆಲ್ವಂ ಉಪವಾಸ ಧರಣಿ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಮಾಜಿ ಮುಖ್ಯಮಂತ್ರಿ ಒ ಪನ್ನೀರ್ಸೆಲ್ವಂ ಮತ್ತು ಬೆಂಬಲಿಗರು ಬುಧವಾರ

ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಮಾಜಿ ಮುಖ್ಯಮಂತ್ರಿ ಒ ಪನ್ನೀರ್ಸೆಲ್ವಂ ಮತ್ತು ಬೆಂಬಲಿಗರು ಬುಧವಾರ ಒಂದು ದಿನದ ಉಪವಾಸ ಧರಣಿಗೆ ಮುಂದಾಗಿದ್ದಾರೆ. 
ತಮಿಳುನಾಡು, ಪುದುಚೆರಿ ಮತ್ತು ಕರೈಕಲ್ ನ ಎಲ್ಲ ಜಿಲ್ಲಾ ಮುಖ್ಯ ಘಟಕಗಳಲ್ಲಿ ಉಪವಾಸ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. 
ಬೆಳಗ್ಗೆ ೯ ಘಂಟೆಯಿಂದ ಸಂಜೆ ೫ ಘಂಟೆಯವರೆಗೆ ಈ ಉಪವಾಸ ಧರಣಿ ಜಾರಿಯಲ್ಲಿರಲಿದೆ. 
ಪನ್ನೀರ್ಸೆಲ್ವಂ ಬಣಕ್ಕೆ ಸೇರಿದ ಎಐಡಿಎಂಕೆ ಸಂಸದರು ಮತ್ತು ಶಾಸಕರು ಕೂಡ ಈ ಪ್ರತಿಭನೆಯಲ್ಲಿ ಭಾಗಿಯಾಗಲಿದ್ದಾರೆ. 
ಚೆನೈನ ಅಪೋಲೋ ಆಸ್ಪತ್ರೆಯಲ್ಲಿ ೭೫ ದಿನಗಳ ಕಾಲ ದಾಖಲಾಗಿದ್ದ ಜಯಲಲಿತಾ ಕಳೆದ ವರ್ಷ ಡಿಸೆಂಬರ್ ನಲ್ಲಿ ಕೊನೆಯುಸಿರೆಳೆದಿದ್ದರು. ಜಯಲಲಿತಾ ಸಾವಿನ ಸುತ್ತ ನಿಗೂಢಗಳಿವೆ ಎಂದು ಪನ್ನೀರ್ಸೆಲ್ವಂ ಬಣದ ಸದಸ್ಯರು ಸಂದೇಹ ವ್ಯಕ್ತಪಡಿಸಿದ್ದಾರೆ. 
ಮಾರ್ಚ್ ೬ ರಂದು ಜಯಲಲಿತಾ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿದ ದಾಖಲೆಗಳನ್ನು ಸಾರ್ವಜನಿಕಗೊಳಿಸಿರುವ ತಮಿಳುನಾಡು ಸರ್ಕಾರ, ಅಮ್ಮ ಅವರಿಗೆ ಅಗತ್ಯವಿದ್ದ ಅತ್ಯುತ್ತಮ ಚಿಕಿತ್ಸೆ ದೊರಕಿದೆ ಎಂದು ತಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT