ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ತಮಿಳುನಾಡಿನ ಆರ್ ಕೆ ನಗರ ಸೇರಿ 12 ವಿಧಾನಸಭೆ, 3 ಲೋಕಸಭಾ ಸ್ಥಾನಗಳಿಗೆ ಏ.9,12ರಂದು ಉಪ ಚುನಾವಣೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜೆ.ಜಯಲಲಿತಾ ಅವರು ಪ್ರತಿನಿಧಿಸುತ್ತಿದ್ದ ಚೆನ್ನೈನ ಆರ್.ಕೆ.ನಗರ ಸೇರಿದಂತೆ ವಿವಿಧ....

ನವದೆಹಲಿ: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜೆ.ಜಯಲಲಿತಾ ಅವರು ಪ್ರತಿನಿಧಿಸುತ್ತಿದ್ದ ಚೆನ್ನೈನ ಆರ್.ಕೆ.ನಗರ ಸೇರಿದಂತೆ ವಿವಿಧ ರಾಜ್ಯಗಳ 12 ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ ಮೂರು ಲೋಕಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗ ಗುರುವಾರ ಉಪ ಚುನಾವಣೆಯ ದಿನಾಂಕ ಪ್ರಕಟಿಸಿದೆ.
ಜಯಲಲಿತಾ ನಿಧನದಿಂದ ತೆರವಾದ ತಮಿಳುನಾಡಿನ ಆರ್ ಕೆ ನಗರ ವಿಧಾನಸಭೆಗೆ ಏಪ್ರಿಲ್ 12ರಂದು ಉಪ ಚುನಾವಣೆ ನಡೆಯಲಿದೆ. ಇನ್ನು ಕರ್ನಾಟಕದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರ ರಾಜಿನಾಮೆಯಿಂದ ತೆರವಾದ ನಂಜನಗೂಡು ಹಾಗೂ ಮಹದೇವ ಪ್ರಸಾದ್ ನಿಧನದಿಂದ ತೆರವಾದ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ಸೇರಿದಂತೆ 11 ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಉಪ ಚುನಾವಣೆ ನಡೆಯಲಿದೆ.
ಇನ್ನು ಶ್ರೀನಗರ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 9ರಂದು ಉಪ ಚುನಾವಣೆ ನಡೆದರೆ, ಅನಂತನಾಗ್ ಲೋಕಸಭಾ ಕ್ಷೇತ್ರ ಹಾಗೂ ಕೇರಳದ ಮಲಪುರಂ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 12ರಂದು ಉಪ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT