ಜಯಲಲಿತಾ 
ಪ್ರಧಾನ ಸುದ್ದಿ

ಲೋಕಸಭೆಯಲ್ಲಿ ಜಯಾ ಸಾವಿನ ಬಗ್ಗೆ ಸಿಬಿಐ ತನಿಖೆಗೆ ಎಐಎಡಿಎಂಕೆ ಸಂಸದರ ಒತ್ತಾಯ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಶುಕ್ರವಾರ....

ನವದೆಹಲಿ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಶುಕ್ರವಾರ ಕೆಲವು ಎಐಎಡಿಎಂಕೆ ಸಂಸದರು ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿದ್ದರಿಂದ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಕಲಾಪವನ್ನು ಕೆಲಕಾಲ ಮುಂದೂಡಿದರು.
ಇಂದು ಲೋಕಸಭೆ ಕಲಾ ಆರಂಭವಾಗುತ್ತಿದ್ದಂತೆ ಎಐಎಡಿಎಂಕೆಯ ಆರು ಸಂಸದರು ಸದನದ ಬಾವಿಗೆ ನುಗ್ಗಿ, ಜಯಲಲಿತಾ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಎಐಎಡಿಎಂಕೆ ಸಂಸದರು ಜಯಲಲಿತಾ ಅವರ ಫಲಕ ಹಿಡಿದು ಘೋಷಣೆ ಕೂಗುತ್ತಿದ್ದರಿಂದ ಸ್ಪೀಕರ್ 10 ನಿಮಿಷಗಳ ಕಾಲ ಕಲಾಪವನ್ನು ಮುಂದೂಡಿದರು. 
ಎಐಎಡಿಎಂಕೆಯ ಕೆಲವು ಸಂಸದರು ಜೈಲು ಪಾಲಾಗಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಅವರನ್ನು ಬೆಂಬಲಿಸುತ್ತಿದ್ದು, ಇನ್ನು ಕೆಲವು ಸಂಸದರು ಮಾಜಿ ಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ ಅವರ ಬೆಂಬಲಕ್ಕೆ ನಿಂತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

Ind Vs SL: ಮಾನವ್ ಸುತಾರ್ ದಾಖಲೆ; 600ನೇ ಟೆಸ್ಟ್ ಪಂದ್ಯದ ಗೆದ್ದು ಸಂಭ್ರಮಿಸಿದ ಟೀಂ ಇಂಡಿಯಾ!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

'ರಾಹುಲ್ ಗಾಂಧಿ' ಕಾರಣಕ್ಕೆ ₹40 ಲಕ್ಷ ಪ್ಯಾಕೇಜ್, ಹ್ಯಾಂಡ್‌ಸಮ್ ಹುಡುಗನನ್ನೇ ರಿಜೆಕ್ಟ್ ಮಾಡಿದ ಹುಡುಗಿ!

ಬಿಡದಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಕ್ರಮ ಪತ್ತೆ; ₹4.91 ಕೋಟಿ ಮೌಲ್ಯದ ನಕಲಿ ಔಷಧಗಳನ್ನು ವಶಪಡಿಸಿಕೊಂಡ FDA!