ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ 
ಪ್ರಧಾನ ಸುದ್ದಿ

ಪಂಜಾಬ್ ಚುನಾವಣಾ ಫಲಿತಾಂಶ ನಿರಾಸೆ ತಂದಿದೆ: ಎಎಪಿ

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವಷ್ಟು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗದೆ ಇರುವುದಕ್ಕೆ ನಿರಾಸೆಯಾಗಿದೆ ಎಂದಿರುವ ಆಮ್ ಆದ್ಮಿ ಪಕ್ಷ ಆದರೆ ಮುಖ್ಯ ವಿರೋಧ ಪಕ್ಷವಾಗಿ

ನವದೆಹಲಿ: ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವಷ್ಟು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗದೆ ಇರುವುದಕ್ಕೆ ನಿರಾಸೆಯಾಗಿದೆ ಎಂದಿರುವ ಆಮ್ ಆದ್ಮಿ ಪಕ್ಷ ಆದರೆ ಮುಖ್ಯ ವಿರೋಧ ಪಕ್ಷವಾಗಿ ಹೊಮ್ಮಿರುವುದು ಕೂಡ ಸಾಧನೆ ಎಂದಿದೆ. 
"ಪಂಜಾಬಿನಲ್ಲಿ ಅಧಿಕಾರಕ್ಕೆ ಬರುವ ಭರವಸೆ ಹೊಂದಿದ್ದೆವು ನಾವು " ಎಂದಿರುವ ಆಮ್ ಆದ್ಮಿ ಪಕ್ಷದ ಮುಖಂಡ ಅಶುತೋಷ್ "ನಮಗೆ ಫಲಿತಾಂಶ ನಿರಾಸೆ ತಂದಿದೆ" ಎಂದು ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವತ್ತ ಮುನ್ನಡೆಯುತ್ತಿರುವ ಹಿನ್ನಲೆಯಲ್ಲಿ ಹೇಳಿದ್ದಾರೆ. 
"ಆದರೆ ನಮ್ಮದು ಹೊಸ ಪಕ್ಷ (ರಾಜ್ಯದಲ್ಲಿ). ಎರಡನೇ ಸ್ಥಾನದಲ್ಲಿ ಇರುವುದು ಕೂಡ ಉತ್ತಮ ಸಾಧನೆಯೇ" ಎಂದು ಅಶುತೋಷ್ ಹೇಳಿದ್ದು "ಇದನ್ನು ಕಡೆಗಣಿಸಬೇಡಿ" ಎಂದಿದ್ದಾರೆ. 
೧೧೭ ಕ್ಷೇತ್ರಗಳಲ್ಲಿ ೧೦೦ ಕಡೆ ಗೆಲ್ಲುವ ಆತ್ಮವಿಶ್ವಾಸದಿಂದ ಇದ್ದ ನಾವು ಈಗ ನಮ್ಮ ಅರಿಕೆಯಲ್ಲಿ ಎಲ್ಲಿ ತಪ್ಪಾಗಿದೆ ಎಂದು ತಿಳಿಯಲು ಎಎಪಿ ನಾಯಕರು ಆತ್ಮವಿಮರ್ಶೆ ಮಾಡಿಕೊಳ್ಳಬೇಕಿದೆ ಎಂದು ಕೂಡ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT