ಸಂಗ್ರಹ ಚಿತ್ರ 
ಪ್ರಧಾನ ಸುದ್ದಿ

ಪರಿಕರ್ ರಾಜಿನಾಮೆ: ಅರುಣ್ ಜೇಟ್ಲಿ ಹೆಗಲಿಗೆ ರಕ್ಷಣಾ ಸಚಿವಾಲಯದ ಜವಾಬ್ದಾರಿ

ತೀವ್ರ ಕುತೂಹಲ ಕೆರಳಿಸಿದ್ದ ಗೋವಾ ವಿಧಾನಸಭೆ ಸರ್ಕಾರ ರಚನೆ ಕಸರತ್ತು ವಿವಾದ ಅಂತ್ಯವಾಗಿದ್ದು, ಮೈತ್ರಿ ಸರ್ಕಾರ ಮಾಡಲು ಬಿಜೆಪಿ ಮುಂದಾಗಿರುವಂತೆಯೇ ಪರಿಕರ್ ಅವರ ರಾಜಿನಾಮೆಯಿಂದ ತೆರವಾಗಿರುವ ಕೇಂದ್ರ ರಕ್ಷಣಾ ಸಚಿವಾಲಯದ ಜವಾಬ್ದಾರಿಯನ್ನು ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರಿಗೆ ನೀಡಲಾಗಿದೆ.

ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಗೋವಾ ವಿಧಾನಸಭೆ ಸರ್ಕಾರ ರಚನೆ ಕಸರತ್ತು ವಿವಾದ ಅಂತ್ಯವಾಗಿದ್ದು, ಮೈತ್ರಿ ಸರ್ಕಾರ ಮಾಡಲು ಬಿಜೆಪಿ ಮುಂದಾಗಿರುವಂತೆಯೇ ಪರಿಕರ್ ಅವರ ರಾಜಿನಾಮೆಯಿಂದ  ತೆರವಾಗಿರುವ ಕೇಂದ್ರ ರಕ್ಷಣಾ ಸಚಿವಾಲಯದ ಜವಾಬ್ದಾರಿಯನ್ನು ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರಿಗೆ ನೀಡಲಾಗಿದೆ.

ಪ್ರಸ್ತುತ ವಿತ್ತ ಸಚಿವಾಲಯದ ಜವಾಬ್ದಾರಿ ಹೊಂದಿರುವ ಅರುಣ್ ಜೇಟ್ಲಿ ಅವರಿಗೆ ಹೆಚ್ಚುವರಿಯಾಗಿ ಈ ಹೊಣೆಗಾರಿಕೆಯನ್ನು ನೀಡಲಾಗಿದೆ. ಮುಂದಿನ ಆಯ್ಕೆಯವರೆಗೂ ಜೇಟ್ಲಿ ಅವರೇ ರಕ್ಷಣಾ ಇಲಾಖೆಯನ್ನು ನಿಭಾಯಿಸಲಿದ್ದಾರೆ  ಎಂದು ಮೂಲಗಳು ತಿಳಿಸಿವೆ.

ಇನ್ನು ಈ ಹಿಂದೆ ಗೋವಾ ಸಿಎಂ ಆಗಿದ್ದ ಮನೋಹರ್ ಪರಿಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಬುಲಾವ್ ಮೇರೆಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿ ಕೇಂದ್ರ ರಕ್ಷಣಾ ಸಚಿವರಾಗಿ ಪ್ರಮಾಣ ವಚನ  ಸ್ವೀಕರಿಸಿದ್ದರು. ಬಳಿಕ ರಕ್ಷಣಾ ಇಲಾಖೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದ ಪರಿಕ್ಕರ್ ಅವರು, ಮತ್ತೆ ರಾಜ್ಯ ರಾಜಕಾರಣದತ್ತ ಮರಳು ಇಂಗಿತ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಗೋವಾ ವಿಧಾನಸಭಾ ಚುನಾವಣೆ  ಘೋಷಣೆಯಾಗಿ ಚುನಾವಣೆಯಲ್ಲಿ ಯಾವುದೇ ರಾಜಕೀಯ ಪಕ್ಷಕ್ಕೂ ಸ್ಪಷ್ಟಬಹುಮತ ಸಿಗದ ಹಿನ್ನಲೆಯಲ್ಲಿ ಇತರೆ ಪಕ್ಷಗಳೊಂದಿಗೆ ಕೈ ಜೋಡಿಸಿರುವ ಬಿಜೆಪಿ ಮತ್ತೆ ಅಧಿಕಾರ ರಚನೆಗೆ ಮುಂದಾಗಿದೆ.

ಹೀಗಾಗಿ ಗೋವಾದಲ್ಲಿ ಪ್ರಭಾವಿ ನಾಯಕರಾಗಿರುವ ಮನೋಹರ್ ಪರಿಕ್ಕರ್ ಅವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿ ಮತ್ತೆ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT