ಸಂಗ್ರಹ ಚಿತ್ರ 
ಪ್ರಧಾನ ಸುದ್ದಿ

ಪರಿಕರ್ ರಾಜಿನಾಮೆ: ಅರುಣ್ ಜೇಟ್ಲಿ ಹೆಗಲಿಗೆ ರಕ್ಷಣಾ ಸಚಿವಾಲಯದ ಜವಾಬ್ದಾರಿ

ತೀವ್ರ ಕುತೂಹಲ ಕೆರಳಿಸಿದ್ದ ಗೋವಾ ವಿಧಾನಸಭೆ ಸರ್ಕಾರ ರಚನೆ ಕಸರತ್ತು ವಿವಾದ ಅಂತ್ಯವಾಗಿದ್ದು, ಮೈತ್ರಿ ಸರ್ಕಾರ ಮಾಡಲು ಬಿಜೆಪಿ ಮುಂದಾಗಿರುವಂತೆಯೇ ಪರಿಕರ್ ಅವರ ರಾಜಿನಾಮೆಯಿಂದ ತೆರವಾಗಿರುವ ಕೇಂದ್ರ ರಕ್ಷಣಾ ಸಚಿವಾಲಯದ ಜವಾಬ್ದಾರಿಯನ್ನು ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರಿಗೆ ನೀಡಲಾಗಿದೆ.

ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಗೋವಾ ವಿಧಾನಸಭೆ ಸರ್ಕಾರ ರಚನೆ ಕಸರತ್ತು ವಿವಾದ ಅಂತ್ಯವಾಗಿದ್ದು, ಮೈತ್ರಿ ಸರ್ಕಾರ ಮಾಡಲು ಬಿಜೆಪಿ ಮುಂದಾಗಿರುವಂತೆಯೇ ಪರಿಕರ್ ಅವರ ರಾಜಿನಾಮೆಯಿಂದ  ತೆರವಾಗಿರುವ ಕೇಂದ್ರ ರಕ್ಷಣಾ ಸಚಿವಾಲಯದ ಜವಾಬ್ದಾರಿಯನ್ನು ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರಿಗೆ ನೀಡಲಾಗಿದೆ.

ಪ್ರಸ್ತುತ ವಿತ್ತ ಸಚಿವಾಲಯದ ಜವಾಬ್ದಾರಿ ಹೊಂದಿರುವ ಅರುಣ್ ಜೇಟ್ಲಿ ಅವರಿಗೆ ಹೆಚ್ಚುವರಿಯಾಗಿ ಈ ಹೊಣೆಗಾರಿಕೆಯನ್ನು ನೀಡಲಾಗಿದೆ. ಮುಂದಿನ ಆಯ್ಕೆಯವರೆಗೂ ಜೇಟ್ಲಿ ಅವರೇ ರಕ್ಷಣಾ ಇಲಾಖೆಯನ್ನು ನಿಭಾಯಿಸಲಿದ್ದಾರೆ  ಎಂದು ಮೂಲಗಳು ತಿಳಿಸಿವೆ.

ಇನ್ನು ಈ ಹಿಂದೆ ಗೋವಾ ಸಿಎಂ ಆಗಿದ್ದ ಮನೋಹರ್ ಪರಿಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಬುಲಾವ್ ಮೇರೆಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿ ಕೇಂದ್ರ ರಕ್ಷಣಾ ಸಚಿವರಾಗಿ ಪ್ರಮಾಣ ವಚನ  ಸ್ವೀಕರಿಸಿದ್ದರು. ಬಳಿಕ ರಕ್ಷಣಾ ಇಲಾಖೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದ ಪರಿಕ್ಕರ್ ಅವರು, ಮತ್ತೆ ರಾಜ್ಯ ರಾಜಕಾರಣದತ್ತ ಮರಳು ಇಂಗಿತ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಗೋವಾ ವಿಧಾನಸಭಾ ಚುನಾವಣೆ  ಘೋಷಣೆಯಾಗಿ ಚುನಾವಣೆಯಲ್ಲಿ ಯಾವುದೇ ರಾಜಕೀಯ ಪಕ್ಷಕ್ಕೂ ಸ್ಪಷ್ಟಬಹುಮತ ಸಿಗದ ಹಿನ್ನಲೆಯಲ್ಲಿ ಇತರೆ ಪಕ್ಷಗಳೊಂದಿಗೆ ಕೈ ಜೋಡಿಸಿರುವ ಬಿಜೆಪಿ ಮತ್ತೆ ಅಧಿಕಾರ ರಚನೆಗೆ ಮುಂದಾಗಿದೆ.

ಹೀಗಾಗಿ ಗೋವಾದಲ್ಲಿ ಪ್ರಭಾವಿ ನಾಯಕರಾಗಿರುವ ಮನೋಹರ್ ಪರಿಕ್ಕರ್ ಅವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿ ಮತ್ತೆ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT