ಓ ಪನ್ನೀರ್ ಸೆಲ್ವಂ 
ಪ್ರಧಾನ ಸುದ್ದಿ

ಈಗ ಎಐಎಡಿಎಂಕೆ ಚಿಹ್ನೆಗಾಗಿ ಕಾದಾಟ: ಚುನಾವಣಾ ಆಯೋಗಕ್ಕೆ ಪನ್ನೀರ್ ಸೆಲ್ವಂ ಭೇಟಿ

ಮುಖ್ಯಮಂತ್ರಿ ಕುರ್ಚಿಗಾಗಿ ಹೋರಾಟ ನಡೆಸಿ ವಿಫಲರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಓ.ಪನ್ನೀರ್ ಸೆಲ್ವಂ ಅವರು...

ನವದೆಹಲಿ: ಮುಖ್ಯಮಂತ್ರಿ ಕುರ್ಚಿಗಾಗಿ ಹೋರಾಟ ನಡೆಸಿ ವಿಫಲರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಓ.ಪನ್ನೀರ್ ಸೆಲ್ವಂ ಅವರು ಈಗ ಎಐಎಡಿಎಂಕೆ ಪಕ್ಷದ 'ಎರಡೆಲೆ' ಚಿಹ್ನೆಗಾಗಿ ಕಾದಾಟ ಆರಂಭಿಸಿದ್ದಾರೆ.
ಈ ಸಂಬಂಧ ಇಂದು ಒಂಬತ್ತು ಸದಸ್ಯರ ನಿಯೋಗದೊಂದಿಗೆ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿ, ವಿ.ಕೆ.ಶಶಿಕಲಾ ಕಾನೂನು ಬಾಹಿರವಾಗಿ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದು, ಅವರ ಆಯ್ಕೆಯನ್ನು ಅಸಿಂಧುಗೊಳಿಸಿ, ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ ಮಾಡಿದ್ದಾರೆ.
ನಮ್ಮ ಪಕ್ಷದ ಬೈಲಾ ಪ್ರಕಾರ, ಶಶಿಕಲಾ ಅವರಿಗೆ ಪಕ್ಷದ ಸದಸ್ಯರನ್ನು ನೇಮಕ ಮಾಡುವ ಮತ್ತು ಉಚ್ಚಾಟಿಸುವ ಅಧಿಕಾರ ಇಲ್ಲ. ಸ್ವತಃ ಅವರೇ ಪಕ್ಷದಿಂದ ಐದು ವರ್ಷಗಳ ಕಾಲ ಉಚ್ಚಾಟನೆಯಾಗಿದ್ದಾರೆ. ಹೀಗಾಗಿ ಅವರು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಲು ಹೇಗೆ ಸಾಧ್ಯ? ನಮ್ಮ ಪಕ್ಷದ ಸಂವಿಧಾನದ ಪ್ರಕಾರ, ಒಂದು ವೇಳೆ ಪ್ರಧಾನ ಕಾರ್ಯದರ್ಶಿ ಹುದ್ದೆ ಖಾಲಿ ಉಳಿದರೆ, ಅವರ ನಂತರದ ಹಿರಿಯ ವ್ಯಕ್ತಿಯನ್ನು ಆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ ಎಂದು ಪನ್ನೀರ್ ಸೆಲ್ವಂ ವಾದಿಸಿದ್ದಾರೆ.
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ನಿಧನದಿಂದ ತೆರವಾದ ಆರ್ ಕೆ ನಗರ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದ್ದು, ಎಐಎಡಿಎಂಕೆಯಿಂದ ಶಶಿಕಲಾ ಸಂಬಂಧಿ ಟಿಟಿವಿ ಧಿನಕರನ್ ಅವರನ್ನು ಕಣಕ್ಕಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪನ್ನೀರ್ ಸೆಲ್ವಂ ಅವರು ಇಂದು ಆಯೋಗಕ್ಕೆ ಭೇಟಿ ನೀಡಿ, ಪಕ್ಷದ ಚಿಹ್ನೆ ತಮಗೆ ನೀಡುವಂತೆ ಕೇಳಿಕೊಂಡಿದ್ದಾರೆ.
ಅಕ್ರಮ ಆಸ್ತಿ ಪ್ರಕರಣದಲ್ಲಿ ಶಶಿಕಲಾ ಜೈಲು ಸೇರುವ ಮುನ್ನ ಧಿನಕರನ್ ಅವರನ್ನು ಪಕ್ಷದ ಉಪ ಪ್ರಧಾನಕಾರ್ಯದರ್ಶಿಯಾಗಿ ನೇಮಕ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT