ವಿಶ್ವಜೀತ್ ರಾಣೆ 
ಪ್ರಧಾನ ಸುದ್ದಿ

ವಿಶ್ವಾಸಮತಕ್ಕೆ ಗೈರು, ಪಕ್ಷ ತೊರೆದ ಗೋವಾ ಕಾಂಗ್ರೆಸ್ ಶಾಸಕ

ಗೋವಾ ವಿಧಾನಸಭೆಯಲ್ಲಿ ಗುರುವಾರ ನಡೆದ ಮಹತ್ವದ ವಿಶ್ವಾಸಮತದ ವೇಳೆ ಗೈರು ಆಗಿದ್ದ ಕಾಂಗ್ರೆಸ್ ಶಾಸಕ ಹಾಗೂ ಹಿರಿಯ....

ಪಣಜಿ: ಗೋವಾ ವಿಧಾನಸಭೆಯಲ್ಲಿ ಗುರುವಾರ ನಡೆದ ಮಹತ್ವದ ವಿಶ್ವಾಸಮತದ ವೇಳೆ ಗೈರು ಆಗಿದ್ದ ಕಾಂಗ್ರೆಸ್ ಶಾಸಕ ಹಾಗೂ ಹಿರಿಯ ಕಾಂಗ್ರೆಸ್ ನಾಯಕರೊಬ್ಬರ ಪುತ್ರ ವಿಶ್ವಜೀತ್ ರಾಣೆ ಅವರು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಕಾಂಗ್ರೆಸ್ ಕೇಂದ್ರ ನಾಯಕರ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ರಾಣೆ, ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ರಾಜಿನಾಮೆ ನೀಡಿದ್ದಾರೆ.
ಪಕ್ಷದ ಕೆಟ್ಟ ನಿರ್ವಹಣೆ ವಿರುದ್ಧ ನಾನು ತೆಗೆದುಕೊಂಡ ಮೊದಲ ಕ್ರಮ ಇದು. ಕಾಂಗ್ರೆಸ್ ನೊಂದಿಗೆ ಮುಂದುವರೆಯುವ ಯಾವುದೇ ಉದ್ದೇಶ ನನಗೆ ಇಲ್ಲ. ಕಾಂಗ್ರೆಸ್ ನಾಯಕರ ಬಗ್ಗೆ ನಾನು ಭ್ರಮನಿರಸನಗೊಂಡಿದ್ದು, ಹೊಸದಾಗಿ ಚುನಾವಣೆ ಎದುರಿಸುತ್ತೇನೆ ಎಂದು ರಾಣೆ ತಿಳಿಸಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಈ ಬಗ್ಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದ ರಾಣೆ, ಪಕ್ಷದ ಕಾರ್ಯನಿರ್ವಹಣೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ ಈ ಬಗ್ಗೆ ಕ್ರಮ ತೆಗೆದುಕೊಳ್ಳದಿದ್ದರೆ ರಾಜಿನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT