ರಾಷ್ಟ್ರಪತಿ ಪ್ರಣಬ್ ಮುಖರ್ಜಿ 
ಪ್ರಧಾನ ಸುದ್ದಿ

ವಿಶ್ವ ಸಮುದಾಯದ ಸಾಮೂಹಿಕ ಕ್ರಮಗಳಿಂದ ಮಾತ್ರ ಭಯೋತ್ಪಾದನೆ ನಿಗ್ರಹ ಸಾಧ್ಯ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ಬ್ರಿಟನ್ ಸಂಸತ್ ಭವನ ಬಳಿ ನಡೆದ ಉಗ್ರ ದಾಳಿ ಪ್ರಕರಣವನ್ನು ಕಟು ಶಬ್ದಗಳಿಂದ ಟೀಕಿಸಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು, ವಿಶ್ವ ಸಮುದಾಯದ ಸಾಮೂಹಿಕ ಕ್ರಮಗಳಿಂದ ಮಾತ್ರ ಭಯೋತ್ಪಾದನೆ ನಿಗ್ರಹ ಸಾಧ್ಯ ಎಂದು ಹೇಳಿದ್ದಾರೆ.

ನವದೆಹಲಿ: ಬ್ರಿಟನ್ ಸಂಸತ್ ಭವನ ಬಳಿ ನಡೆದ ಉಗ್ರ ದಾಳಿ ಪ್ರಕರಣವನ್ನು ಕಟು ಶಬ್ದಗಳಿಂದ ಟೀಕಿಸಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು, ವಿಶ್ವ ಸಮುದಾಯದ ಸಾಮೂಹಿಕ ಕ್ರಮಗಳಿಂದ ಮಾತ್ರ ಭಯೋತ್ಪಾದನೆ  ನಿಗ್ರಹ ಸಾಧ್ಯ ಎಂದು ಹೇಳಿದ್ದಾರೆ.

ಟ್ವಿಟರ್ ನಲ್ಲಿ ಲಂಡನ್ ಉಗ್ರ ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು, ಬ್ರಿಟನ್ ಸರ್ಕಾರದೊಂದಿಗೆ ಭಾರತ ಬೆಂಬಲವಾಗಿರಲಿದೆ. ವಿಶ್ವ ಸಮುದಾಯ ಸಾಮೂಹಿಕವಾಗಿ ಹೋರಾಡಿದರೆ ಮಾತ್ರ  ಭಯೋತ್ಪಾದನೆಯನ್ನು ಬುಡಸಹಿತ ಕಿತ್ತೆಸೆಯಬಹುದು. ಇದಕ್ಕಾಗಿ ವಿಶ್ವ ಸಮುದಾಯದ ಸಾಮೂಹಿಕ ಕ್ರಮಗಳು ಅತ್ಯಗತ್ಯ ಎಂದು ಹೇಳಿದ್ದಾರೆ.

ಲಂಡನ್ ಸಂಸತ್ ಭವನದ ಬಳಿ ಉಗ್ರ ದಾಳಿ ನಡೆದ ಕುರಿತು ಮಾಹಿತಿ ಕೇಳಿ ನಿಜಕ್ಕೂ ಆಘಾತವಾಯಿತು. ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಸ್ಥರಿಗೆ ಸಂತಾಪ ಸೂಚಿಸುತ್ತೇನೆ ಎಂದು ಪ್ರಣಬ್ ಮುಖರ್ಜಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT