ರಾಷ್ಟ್ರಪತಿ ಪ್ರಣಬ್ ಮುಖರ್ಜಿ 
ಪ್ರಧಾನ ಸುದ್ದಿ

ವಿಶ್ವ ಸಮುದಾಯದ ಸಾಮೂಹಿಕ ಕ್ರಮಗಳಿಂದ ಮಾತ್ರ ಭಯೋತ್ಪಾದನೆ ನಿಗ್ರಹ ಸಾಧ್ಯ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ಬ್ರಿಟನ್ ಸಂಸತ್ ಭವನ ಬಳಿ ನಡೆದ ಉಗ್ರ ದಾಳಿ ಪ್ರಕರಣವನ್ನು ಕಟು ಶಬ್ದಗಳಿಂದ ಟೀಕಿಸಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು, ವಿಶ್ವ ಸಮುದಾಯದ ಸಾಮೂಹಿಕ ಕ್ರಮಗಳಿಂದ ಮಾತ್ರ ಭಯೋತ್ಪಾದನೆ ನಿಗ್ರಹ ಸಾಧ್ಯ ಎಂದು ಹೇಳಿದ್ದಾರೆ.

ನವದೆಹಲಿ: ಬ್ರಿಟನ್ ಸಂಸತ್ ಭವನ ಬಳಿ ನಡೆದ ಉಗ್ರ ದಾಳಿ ಪ್ರಕರಣವನ್ನು ಕಟು ಶಬ್ದಗಳಿಂದ ಟೀಕಿಸಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು, ವಿಶ್ವ ಸಮುದಾಯದ ಸಾಮೂಹಿಕ ಕ್ರಮಗಳಿಂದ ಮಾತ್ರ ಭಯೋತ್ಪಾದನೆ  ನಿಗ್ರಹ ಸಾಧ್ಯ ಎಂದು ಹೇಳಿದ್ದಾರೆ.

ಟ್ವಿಟರ್ ನಲ್ಲಿ ಲಂಡನ್ ಉಗ್ರ ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು, ಬ್ರಿಟನ್ ಸರ್ಕಾರದೊಂದಿಗೆ ಭಾರತ ಬೆಂಬಲವಾಗಿರಲಿದೆ. ವಿಶ್ವ ಸಮುದಾಯ ಸಾಮೂಹಿಕವಾಗಿ ಹೋರಾಡಿದರೆ ಮಾತ್ರ  ಭಯೋತ್ಪಾದನೆಯನ್ನು ಬುಡಸಹಿತ ಕಿತ್ತೆಸೆಯಬಹುದು. ಇದಕ್ಕಾಗಿ ವಿಶ್ವ ಸಮುದಾಯದ ಸಾಮೂಹಿಕ ಕ್ರಮಗಳು ಅತ್ಯಗತ್ಯ ಎಂದು ಹೇಳಿದ್ದಾರೆ.

ಲಂಡನ್ ಸಂಸತ್ ಭವನದ ಬಳಿ ಉಗ್ರ ದಾಳಿ ನಡೆದ ಕುರಿತು ಮಾಹಿತಿ ಕೇಳಿ ನಿಜಕ್ಕೂ ಆಘಾತವಾಯಿತು. ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಸ್ಥರಿಗೆ ಸಂತಾಪ ಸೂಚಿಸುತ್ತೇನೆ ಎಂದು ಪ್ರಣಬ್ ಮುಖರ್ಜಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT