ಸಂಗ್ರಹ ಚಿತ್ರ 
ಪ್ರಧಾನ ಸುದ್ದಿ

"ನಿಷೇಧಿತ ಪ್ರಯಾಣಿಕ"ರ ಪಟ್ಟಿಗೆ ಸಂಸದ ರವೀಂದ್ರ ಗಾಯಕ್ವಾಡ್ ಸೇರ್ಪಡೆ!

ಸಿಬ್ಬಂದಿಗೆ ಚಪ್ಪಲಿಯಿಂದ ಥಳಿಸಿ ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದ ಶಿವಸೇನೆ ಸಂಸದ ರವೀಂದ್ರ ಗಾಯಕ್ವಾಡ್ ಅವರನ್ನು ಏರ್ ಇಂಡಿಯಾ ವಿಮಾನಯಾನ ಸಂಸ್ಥೆ "ನಿಷೇಧಿತ ಪ್ರಯಾಣಿಕ" ಪಟ್ಟಿಗೆ ಸೇರಿಸಿದೆ ಎಂದು ತಿಳಿದುಬಂದಿದೆ.

ನವದೆಹಲಿ: ಸಿಬ್ಬಂದಿಗೆ ಚಪ್ಪಲಿಯಿಂದ ಥಳಿಸಿ ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದ ಶಿವಸೇನೆ ಸಂಸದ ರವೀಂದ್ರ ಗಾಯಕ್ವಾಡ್ ಅವರನ್ನು ಏರ್ ಇಂಡಿಯಾ ವಿಮಾನಯಾನ ಸಂಸ್ಥೆ "ನಿಷೇಧಿತ ಪ್ರಯಾಣಿಕ" ಪಟ್ಟಿಗೆ ಸೇರಿಸಿದೆ ಎಂದು ತಿಳಿದುಬಂದಿದೆ.

ನಿನ್ನೆ ಬಿಸಿನೆಸ್ ಕ್ಲಾಸ್ ಸೀಟಿಗಾಗಿ ಪಟ್ಟು ಹಿಡಿದು ಸಿಬ್ಬಂದಿಯೊಂದಿಗೆ ಕಾದಾಟ ನಡೆಸಿದ್ದ ಶಿವಸೇನೆ ಸಂಸದ ರವೀಂದ್ರ ಗಾಯಕ್ವಾಡ್ ವಿರುದ್ಧ ಏರ್ ಇಂಡಿಯಾ ಸಂಸ್ಥೆ ಕಠಿಣ ಕ್ರಮ ಕೈಗೊಂಡಿದ್ದು, ಇನ್ನೆಂದೂ ಏರ್ ಇಂಡಿಯಾ  ವಿಮಾನದಲ್ಲಿ ಸಂಸದ ರವೀಂದ್ರ ಗಾಯಕ್ವಾಡ್ ಪ್ರಯಾಣ ಮಾಡದಂತೆ ಅವರ ಹೆಸರನ್ನು "ನಿಷೇಧಿತ ಪ್ರಯಾಣಿಕ" ಪಟ್ಟಿಗೆ ಸೇರಿಸಿದೆ. ಸಂಸದ ರವೀಂದ್ರ ಗಾಯಕ್ವಾಡ್ ಅವರು ತಮ್ಮ ಸಂಸ್ಥೆಯ ಹಾಗೂ ಸಿಬ್ಬಂದಿಯ ಕ್ಷಮೆ ಕೇಳದ  ಹೊರತು ತಾವು ಆ ಪಟ್ಟಿಯಿಂದ ಅವರ ಹೆಸರನ್ನು ತೆಗೆಯುವುದಿಲ್ಲ ಮತ್ತು ಏರ್ ಇಂಡಿಯಾ ವಿಮಾನದಲ್ಲಿ ಅವರ ಪ್ರಯಾಣಕ್ಕೆ ಅನುವು ಮಾಡಿಕೊಡುವುದಿಲ್ಲ ಎಂದು ಸಂಸ್ಥೆ ಖಡಕ್ ಎಚ್ಚರಿಕೆ ನೀಡಿದೆ.

ರವೀಂದ್ರ ಗಾಯಕ್ವಾಡ್ ಅವರನ್ನು ಫೆಡರೇಷನ್ ಆಫ್ ಏರ್ ಇಂಡಿಯಾ ಏರ್ ಲೈನ್ಸ್ ಸಂಸ್ಥೆಯ ಗವರ್ನಿಂಗ್ ಬಾಡಿ ಕಪ್ಪು ಪಟ್ಟಿಗೆ ಸೇರಿಸಿದ್ದು, ಅಸಭ್ಯ ವರ್ತನೆ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಸ್ಥೆ  ಸ್ಪಷ್ಟಪಡಿಸಿದೆ. ಈಗಾಗಲೇ ಈ ಪಟ್ಟಿಯನ್ನು ಏರ್ ಇಂಡಿಯಾ ಅಧ್ಯಕ್ಷ ಅಶ್ವಾನಿ ಲೊಹಾನಿ ಅವರಿಗೆ ಕಳುಹಿಸಲಾಗಿದ್ದು, ಅವರ ಅನುಮೋದನೆ ದೊರೆತ ಬಳಿಕ ಸಂಸ್ಥೆಯ ವೆಬ್ ತಾಣದಲ್ಲಿ ಪ್ರಕಟಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಮೊದಲು ಸಿಬ್ಬಂದಿ ಕ್ಷಮೆ ಕೇಳಲಿ ಬಳಿಕ ಮುಂದಿನದ್ದು ಆಲೋಚಿಸುವೆ
ಇನ್ನು ಏರ್ ಇಂಡಿಯಾ ಸಂಸ್ಥೆ ತಮ್ಮನ್ನು ಕಪ್ಪು ಪಟ್ಟಿಗೆ ಸೇರಿಸಿದ ಬೆನ್ನಲ್ಲೇ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ರವೀಂದ್ರ ಗಾಯಕ್ವಾಡ್ ಅವರು, ಮೊದಲು ಸಿಬ್ಬಂದಿ ಕ್ಷಮೆ ಕೇಳಲಿ. ಬಳಿಕ ಮುಂದಿನದ್ದು  ಆಲೋಚಿಸುತ್ತೇನೆ. ಒಂದು ವೇಳೆ ಭವಿಷ್ಯದಲ್ಲೂ ಇದೇ ರೀತಿ ಸಂಸ್ಥೆಯ ಸಿಬ್ಬಂದಿ ವರ್ತಿಸಿದರೆ ಇಂತಹುದೇ ಪ್ರಸಂಗ ಮರುಕಳಿಸುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT