ಸಂಗ್ರಹ ಚಿತ್ರ 
ಪ್ರಧಾನ ಸುದ್ದಿ

ಸಿಮ್ ಕಾರ್ಡ್, ಪ್ಯಾನ್ ಕಾರ್ಡ್ ಗೂ ಇನ್ನು ಆಧಾರ್ ಕಡ್ಡಾಯ!

ಮಹತ್ವದ ಬೆಳವಣಿಗೆಯಲ್ಲಿ ಸಿಮ್ ಕಾರ್ಡ್ ಹಾಗೂ ಪ್ಯಾನ್ ಕಾರ್ಡ್ ಗಳಿಗೂ ಕೇಂದ್ರ ಸರ್ಕಾರ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಸಿಮ್ ಕಾರ್ಡ್ ಹಾಗೂ ಪ್ಯಾನ್ ಕಾರ್ಡ್ ಗಳಿಗೂ ಕೇಂದ್ರ ಸರ್ಕಾರ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.

ಮೊಬೈಲ್‌ ಸಿಮ್‌ ಕಾರ್ಡ್ ಪಡೆಯಲೂ ಆಧಾರ್‌ ನೀಡುವುದು ಶೀಘ್ರ ಕಡ್ಡಾಯವಾಗಲಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಟೆಲಿಕಾಂ ಕಂಪನಿಗಳಿಗೆ ಕೇಂದ್ರ ಸರ್ಕಾರ ನೋಟಿಸ್‌ ಜಾರಿ ಮಾಡಿದ್ದು, ಗ್ರಾಹಕರ ಸಿಮ್‌ ಕಾರ್ಡ್‌  ಗಳನ್ನು ಆಧಾರ್‌ ಜೊತೆ ಸಂಯೋಜನೆ ಖಚಿತಪಡಿಸಿಕೊಳ್ಳುವಂತೆ ಸೂಚಿಸಿದೆ. ಹಾಲಿ ಗ್ರಾಹಕರಿಗೂ ಈ ನಿಯಮ ಅನ್ವಯವಾಗಲಿದ್ದು, ಟೆಲಿಕಾಂ ಕಂಪನಿಗಳು ತನ್ನ ಎಲ್ಲಾ ಗ್ರಾಹಕರ ದಾಖಲೆಗಳನ್ನು ಮರು ಪರಿಶೀಲನೆ ನಡೆಸಲಿವೆ  ಎಂದು ತಿಳಿದುಬಂದಿದೆ.

ಪ್ರಿಪೇಡ್‌ ಮತ್ತು ಪೋಸ್ಟ್‌ಪೇಡ್‌ ಗ್ರಾಹಕರು ಆಧಾರ್‌ ಕೆವೈಸಿ ಅರ್ಜಿಯನ್ನು ಭರ್ತಿ ಮಾಡಿಕೊಡಬೇಕಾಗುತ್ತದೆ. ಎಸ್‌ ಎಂಎಸ್‌ ಮೂಲಕ ಪರಿಶೀಲನಾ ಪ್ರಕ್ರಿಯೆ ನಡೆಯಲಿದ್ದು, ಗ್ರಾಹಕರಿಗೆ ಕಂಪನಿಗಳು ಪ್ರಮಾಣೀಕರಣ ಕೋಡ್‌  ಗಳನ್ನು ಕಳುಹಿಸಿಕೊಡಲಿವೆ.

ಆಧಾರ್‌ ಲಿಂಕ್‌ ಆಗದ ಪ್ಯಾನ್‌ ಕಾರ್ಡ್‌ ರದ್ದು?

ಇನ್ನು ಆದಾಯ ತೆರಿಗೆ ಪಾವತಿ, ಹೊಸ ಪ್ಯಾನ್‌ ಕಾರ್ಡ್‌ ಗೆ ಅರ್ಜಿ ಸಲ್ಲಿಸಲು ಆಧಾರ್‌ ಕಡ್ಡಾಯಗೊಳಿಸುವ ಮಸೂದೆಯನ್ನು ಲೋಕಸಭೆ ಅಂಗೀಕರಿಸಿದ ಬೆನ್ನಲ್ಲೇ ಈಗಾಗಲೇ ಪ್ಯಾನ್‌ ಕಾರ್ಡ್‌ ಹೊಂದಿದವರಿಗೂ ಆಧಾರ್‌  ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಡಿಸೆಂಬರ್ 31ರೊಳಗೆ ಪ್ಯಾನ್‌ ಕಾರ್ಡ್‌ ನಂಬರ್‌ಗೆ ಆಧಾರ್‌ ಸಂಖ್ಯೆ ಲಿಂಕ್ ಮಾಡದೇ ಇದ್ದಲ್ಲಿ, ಅಂತಹ ಪ್ಯಾನ್‌ ಕಾರ್ಡ್‌ಗಳ ಮಾನ್ಯತೆ ರದ್ದು ಪಡಿಸುವಂತಹ ಕ್ರಮವನ್ನು  ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಆದಾಯ ತೆರಿಗೆ ಪಾವತಿದಾರರು ತೆರಿಗೆ ಪಾವತಿ ವೇಳೆ ಕಡ್ಡಾಯವಾಗಿ ಪ್ಯಾನ್‌ ಸಂಖ್ಯೆ ನಮೂದಿಸಬೇಕಾಗಿದೆ. ವಿದ್ಯಾರ್ಥಿಗಳಂತಹ ತೆರಿಗೆ ವ್ಯಾಪ್ತಿಗಿಂತ ಹೊರಗಿರುವ ವ್ಯಕ್ತಿಗಳು ಗುರುತಿನ ಚೀಟಿಯಾಗಿ ಪ್ಯಾನ್‌ ಕಾರ್ಡ್‌  ಬಳಸುತ್ತಾರೆ. ಆದರೆ ಕೆಲವು ವ್ಯಕ್ತಿಗಳು ಅಕ್ರಮವಾಗಿ ಪ್ಯಾನ್‌ ಕಾರ್ಡ್‌ ಪಡೆದುಕೊಂಡಿದ್ದಾರೆ. ಆಧಾರ್‌ ಜತೆ ಜೋಡಣೆ ಮಾಡಿದರೆ ಒಬ್ಬೊಬ್ಬರೇ ಹಲವು ಪ್ಯಾನ್‌ ಕಾರ್ಡ್‌ ಹೊಂದಿರುವ ಪ್ರಕರಣಗಳನ್ನು ಪತ್ತೆ ಹಚ್ಚಬಹುದಾಗಿದೆ ಇದೇ  ಕಾರಣಕ್ಕೆ ಪ್ಯಾನ್ ಕಾರ್ಡ್ ಗೂ ಆಧಾರ್ ಲಿಂಕ್ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT