ಸಂಗ್ರಹ ಚಿತ್ರ 
ಪ್ರಧಾನ ಸುದ್ದಿ

ಸಿಮ್ ಕಾರ್ಡ್, ಪ್ಯಾನ್ ಕಾರ್ಡ್ ಗೂ ಇನ್ನು ಆಧಾರ್ ಕಡ್ಡಾಯ!

ಮಹತ್ವದ ಬೆಳವಣಿಗೆಯಲ್ಲಿ ಸಿಮ್ ಕಾರ್ಡ್ ಹಾಗೂ ಪ್ಯಾನ್ ಕಾರ್ಡ್ ಗಳಿಗೂ ಕೇಂದ್ರ ಸರ್ಕಾರ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಸಿಮ್ ಕಾರ್ಡ್ ಹಾಗೂ ಪ್ಯಾನ್ ಕಾರ್ಡ್ ಗಳಿಗೂ ಕೇಂದ್ರ ಸರ್ಕಾರ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.

ಮೊಬೈಲ್‌ ಸಿಮ್‌ ಕಾರ್ಡ್ ಪಡೆಯಲೂ ಆಧಾರ್‌ ನೀಡುವುದು ಶೀಘ್ರ ಕಡ್ಡಾಯವಾಗಲಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಟೆಲಿಕಾಂ ಕಂಪನಿಗಳಿಗೆ ಕೇಂದ್ರ ಸರ್ಕಾರ ನೋಟಿಸ್‌ ಜಾರಿ ಮಾಡಿದ್ದು, ಗ್ರಾಹಕರ ಸಿಮ್‌ ಕಾರ್ಡ್‌  ಗಳನ್ನು ಆಧಾರ್‌ ಜೊತೆ ಸಂಯೋಜನೆ ಖಚಿತಪಡಿಸಿಕೊಳ್ಳುವಂತೆ ಸೂಚಿಸಿದೆ. ಹಾಲಿ ಗ್ರಾಹಕರಿಗೂ ಈ ನಿಯಮ ಅನ್ವಯವಾಗಲಿದ್ದು, ಟೆಲಿಕಾಂ ಕಂಪನಿಗಳು ತನ್ನ ಎಲ್ಲಾ ಗ್ರಾಹಕರ ದಾಖಲೆಗಳನ್ನು ಮರು ಪರಿಶೀಲನೆ ನಡೆಸಲಿವೆ  ಎಂದು ತಿಳಿದುಬಂದಿದೆ.

ಪ್ರಿಪೇಡ್‌ ಮತ್ತು ಪೋಸ್ಟ್‌ಪೇಡ್‌ ಗ್ರಾಹಕರು ಆಧಾರ್‌ ಕೆವೈಸಿ ಅರ್ಜಿಯನ್ನು ಭರ್ತಿ ಮಾಡಿಕೊಡಬೇಕಾಗುತ್ತದೆ. ಎಸ್‌ ಎಂಎಸ್‌ ಮೂಲಕ ಪರಿಶೀಲನಾ ಪ್ರಕ್ರಿಯೆ ನಡೆಯಲಿದ್ದು, ಗ್ರಾಹಕರಿಗೆ ಕಂಪನಿಗಳು ಪ್ರಮಾಣೀಕರಣ ಕೋಡ್‌  ಗಳನ್ನು ಕಳುಹಿಸಿಕೊಡಲಿವೆ.

ಆಧಾರ್‌ ಲಿಂಕ್‌ ಆಗದ ಪ್ಯಾನ್‌ ಕಾರ್ಡ್‌ ರದ್ದು?

ಇನ್ನು ಆದಾಯ ತೆರಿಗೆ ಪಾವತಿ, ಹೊಸ ಪ್ಯಾನ್‌ ಕಾರ್ಡ್‌ ಗೆ ಅರ್ಜಿ ಸಲ್ಲಿಸಲು ಆಧಾರ್‌ ಕಡ್ಡಾಯಗೊಳಿಸುವ ಮಸೂದೆಯನ್ನು ಲೋಕಸಭೆ ಅಂಗೀಕರಿಸಿದ ಬೆನ್ನಲ್ಲೇ ಈಗಾಗಲೇ ಪ್ಯಾನ್‌ ಕಾರ್ಡ್‌ ಹೊಂದಿದವರಿಗೂ ಆಧಾರ್‌  ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಡಿಸೆಂಬರ್ 31ರೊಳಗೆ ಪ್ಯಾನ್‌ ಕಾರ್ಡ್‌ ನಂಬರ್‌ಗೆ ಆಧಾರ್‌ ಸಂಖ್ಯೆ ಲಿಂಕ್ ಮಾಡದೇ ಇದ್ದಲ್ಲಿ, ಅಂತಹ ಪ್ಯಾನ್‌ ಕಾರ್ಡ್‌ಗಳ ಮಾನ್ಯತೆ ರದ್ದು ಪಡಿಸುವಂತಹ ಕ್ರಮವನ್ನು  ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಆದಾಯ ತೆರಿಗೆ ಪಾವತಿದಾರರು ತೆರಿಗೆ ಪಾವತಿ ವೇಳೆ ಕಡ್ಡಾಯವಾಗಿ ಪ್ಯಾನ್‌ ಸಂಖ್ಯೆ ನಮೂದಿಸಬೇಕಾಗಿದೆ. ವಿದ್ಯಾರ್ಥಿಗಳಂತಹ ತೆರಿಗೆ ವ್ಯಾಪ್ತಿಗಿಂತ ಹೊರಗಿರುವ ವ್ಯಕ್ತಿಗಳು ಗುರುತಿನ ಚೀಟಿಯಾಗಿ ಪ್ಯಾನ್‌ ಕಾರ್ಡ್‌  ಬಳಸುತ್ತಾರೆ. ಆದರೆ ಕೆಲವು ವ್ಯಕ್ತಿಗಳು ಅಕ್ರಮವಾಗಿ ಪ್ಯಾನ್‌ ಕಾರ್ಡ್‌ ಪಡೆದುಕೊಂಡಿದ್ದಾರೆ. ಆಧಾರ್‌ ಜತೆ ಜೋಡಣೆ ಮಾಡಿದರೆ ಒಬ್ಬೊಬ್ಬರೇ ಹಲವು ಪ್ಯಾನ್‌ ಕಾರ್ಡ್‌ ಹೊಂದಿರುವ ಪ್ರಕರಣಗಳನ್ನು ಪತ್ತೆ ಹಚ್ಚಬಹುದಾಗಿದೆ ಇದೇ  ಕಾರಣಕ್ಕೆ ಪ್ಯಾನ್ ಕಾರ್ಡ್ ಗೂ ಆಧಾರ್ ಲಿಂಕ್ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT