ರಜನಿಕಾಂತ್ 
ಪ್ರಧಾನ ಸುದ್ದಿ

ಪ್ರತಿಭಟನೆ ಹಿನ್ನಲೆಯಲ್ಲಿ ರಜನಿಕಾಂತ್ ಲಂಕಾ ಭೇಟಿ ರದ್ದು, ನಾ ರಾಜಕಾರಣಿ ಅಲ್ಲ ಎಂದ ತಲೈವಾ

ರಾಜಕೀಯ ನಾಯಕರ ಮನವಿ ಹಿನ್ನೆಲೆಯಲ್ಲಿ ಎರಡು ದಿನಗಳ ತಮ್ಮ ಶ್ರೀಲಂಕಾ ಭೇಟಿಯನ್ನು ರದ್ದುಗೊಳಿಸಿರುವುದಾಗಿ ಶನಿವಾರ ಸೂಪರ್....

ಚೆನ್ನೈ: ರಾಜಕೀಯ ನಾಯಕರ ಮನವಿ ಹಿನ್ನೆಲೆಯಲ್ಲಿ ಎರಡು ದಿನಗಳ ತಮ್ಮ ಶ್ರೀಲಂಕಾ ಭೇಟಿಯನ್ನು ರದ್ದುಗೊಳಿಸಿರುವುದಾಗಿ ಶನಿವಾರ ಸೂಪರ್ ಸ್ಟಾರ್ ರಜನಿಕಾಂತ್ ಅವರು ಹೇಳಿದ್ದಾರೆ.
ತಮಿಳು ರಾಜಕೀಯ ನಾಯಕರ ಮನವಿ ಹಿನ್ನಲೆಯಲ್ಲಿ ತಾವು ಲೈಕಾ ಗ್ರೂಪ್ ನ ಜ್ಞಾನಂ ಫೌಂಡೇಶನ್ ಕಾರ್ಯಕ್ರಮದಿಂದ ದೂರ ಉಳಿಯುತ್ತಿರುವುದಾಗಿ ರಜನಿಕಾಂತ್ ಇಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ನಾನು ರಾಜಕೀಯ ನಾಯಕ ಅಲ್ಲ. ನಾನೊಬ್ಬ ಕಲಾವಿದ. ಒಂದು ವೇಳೆ ಮತ್ತೆ ಲಂಕಾಗೆ ಭೇಟಿ ನೀಡುವ ಅವಕಾಶ ಸಿಕ್ಕರೆ ತಡೆಯಬೇಡಿ ಎಂದು ತಲೈವಾ ಮನವಿ ಮಾಡಿದ್ದಾರೆ.
ನಿಗದಿಯಂತೆ ಏ.9ಕ್ಕೆ ರಜನಿಕಾಂತ್ ಶ್ರೀಲಂಕಾದ ಜಾಫ್ನಾಕ್ಕೆ ತೆರಳಿ, ನಿರಾಶ್ರಿತ ತಮಿಳಿರಿಗಾಗಿ 22 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಿಸಿರುವ 150 ಮನೆಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿತ್ತು. ಆದರೆ ತಮಿಳು ರಾಜಕೀಯ ಪಕ್ಷಗಳು ಮತ್ತು ವಿವಿಧ ಸಂಘಟನೆಗಳು, ತಮಿಳರನ್ನು ಕಡೆಗಣಿಸುವ ಶ್ರೀಲಂಕಾಕ್ಕೆ ಭೇಟಿ ನೀಡಬಾರದು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದವು.
ತಿರುಮಾವಲಾವನ್ ನೇತೃತ್ವದ ವಿಸಿಕೆ ಮತ್ತು ವೈಕೋ ನೇತೃತ್ವದ ಎಂಡಿಎಂಕೆ ಸಂಘಟನೆಗಳು ರಜನಿಕಾಂತ್ ಶ್ರೀಲಂಕಾ ಭೇಟಿಯನ್ನು ತೀವ್ರ ವಿರೋಧಿಸಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಕಾಂಗ್ರೆಸ್ ಗೆ ಅವಮಾನವಾಗುವ ಹೇಳಿಕೆ ನೀಡಲು ನಿಮಗೆ ಯಾರ ಒತ್ತಡವಿದೆ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

SCROLL FOR NEXT