ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಬಿಜೆಪಿ ಪಕ್ಷ ಸೇರಿದ ಎಎಪಿ ಶಾಸಕ ವೇದ್ ಪ್ರಕಾಶ್

ಏಪ್ರಿಲ್ ೨೩ ರಂದು ನಡೆಯಲಿರುವ ನಗರಸಭಾ ಚುನಾವಣೆಯಲ್ಲಿ ಆಡಳಿತ ಆಮ್ ಆದ್ಮಿ ಪಕ್ಷಕ್ಕೆ ಹಿನ್ನಡೆಯಾಗುವ ನಡೆಯಲ್ಲಿ ಎಎಪಿ ಶಾಸಕ ವೇದ್ ಪ್ರಕಾಶ್ ಪಕ್ಷ ತೊರೆದು ಸೋಮವಾರ ಭಾರತೀಯ

ನವದೆಹಲಿ: ಏಪ್ರಿಲ್ ೨೩ ರಂದು ನಡೆಯಲಿರುವ ನಗರಸಭಾ ಚುನಾವಣೆಯಲ್ಲಿ ಆಡಳಿತ ಆಮ್ ಆದ್ಮಿ ಪಕ್ಷಕ್ಕೆ ಹಿನ್ನಡೆಯಾಗುವ ನಡೆಯಲ್ಲಿ ಎಎಪಿ ಶಾಸಕ ವೇದ್ ಪ್ರಕಾಶ್ ಪಕ್ಷ ತೊರೆದು ಸೋಮವಾರ ಭಾರತೀಯ ಜನತಾ ಪಕ್ಷ ಸೇರುತ್ತಿರುವುದಾಗಿ ಘೋಷಿಸಿದ್ದಾರೆ. 
ಎಎಪಿಯಲ್ಲಿ ಆತಂತರಿಕ ಪ್ರಜಾಪ್ರಭುತ್ವ ಇಲ್ಲ ಎಂದು ದೂರಿರುವ ಭವಾನದ ಶಾಸಕ, ೨೦೧೫ ರಲ್ಲಿ ವಿಧಾನಸಭಾ ಚುನಾವಣೆ ಗೆಲ್ಲುವ ಮೊದಲು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೀಡಿದ್ದ ಭರವಸೆಗಳನ್ನು ಪೂರೈಸಲು ವಿಫಲರಾಗಿದ್ದಾರೆ ಎಂದು ಕೂಡ ಅವರು ಆರೋಪಿಸಿದ್ದಾರೆ. 
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಸೇರುವ ತಮ್ಮ ನಿರ್ಧಾರವನ್ನು ಪ್ರಕಾಶ್ ಪ್ರಕಟಿಸಿದ್ದಾರೆ. ಈ ಸಭೆಯಲ್ಲಿ ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಕೂಡ ಉಪಸ್ಥಿತರಿದ್ದರು. 
ಉತ್ತರ, ಪೂರ್ವ ಮತ್ತು ದಕ್ಷಿಣ ದೆಹಲಿಯ ೨೭೨ ವಾರ್ಡ್ ಗಳ ಮುನ್ಸಿಪಲ್ ಚುನಾವಣೆ ಏಪ್ರಿಲ್ ೨೩ ಕ್ಕೆ ನಡೆಯಲಿದ್ದು, ಏಪ್ರಿಲ್ ೨೫ ಕ್ಕೆ ಫಲಿತಾಂಶ ಹೊರಬೀಳಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

Ganesh Chaturthi ಎಫೆಕ್ಟ್; ಮತ್ತೆ ಗಗನದತ್ತ ಮುಖ ಮಾಡಿದ ಚಿನ್ನದ ಬೆಲೆ, ಇಂದಿನ ದರ ಪಟ್ಟಿ ಇಂತಿದೆ!

ಕೊಹಿಮಾ, ವಿಶಾಖಪಟ್ಟಣಂ, ಭುವನೇಶ್ವರ ಮಹಿಳೆಯರಿಗೆ ಸುರಕ್ಷಿತ ನಗರ; ಪಾಟ್ನಾ, ಜೈಪುರ ಅಸುರಕ್ಷಿತ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

SCROLL FOR NEXT