ಪ್ರಧಾನ ಸುದ್ದಿ

ವಿಷಾನಿಲ ಸೇವಿಸಿ ಆಂದ್ರದಲ್ಲಿ ಐವರ ಸಾವು

Guruprasad Narayana
ವಿಜಯವಾಡ: ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ವಿಷಾನಿಲ ಸೇವಿಸಿ ಐವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಗುರುವಾರ ಪೊಲೀಸರು ಹೇಳಿದ್ದಾರೆ. 
ಮೊಗಾಳ್ಥುರ್ ನಲ್ಲಿ ಆಕ್ವಾ ಆಹಾರ ಸಂಸ್ಕರಣಾ ಘಟಕದಲ್ಲಿ ರಾಸಾಯನಿಕ ಕೊಳವನ್ನು ಸ್ವಚ್ಛಗೊಳಿಸುವಾಗ ಈ ಘಟನೆ ನಡೆದಿದೆ. 
ಈ ಐವರು ವಿಷಾನಿಲ ಸೇವಿಸಿ ಮೃತಪಟ್ಟಿದ್ದಾರೆಯೇ ಅಥವಾ ಆಮ್ಲಜನಕದ ಕೊರತೆಯಿಂದ ಉಸಿರುಗಟ್ಟಿ ಸತ್ತಿದ್ದಾರೆಯೇ ಎಂದು ಪತ್ತೆಹಚ್ಚಲು ತನಿಖೆ ಜಾರಿಯಲ್ಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 
ಘಟಕದ ನಿರ್ವಹಣೆಯಲ್ಲಿನ ನಿರ್ಲಕ್ಷ್ಯದಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಸಂತ್ರಸ್ತರ ಕುಟುಂಬವರ್ಗ ಆರೋಪಿಸಿದೆ. 
SCROLL FOR NEXT