ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ 
ಪ್ರಧಾನ ಸುದ್ದಿ

ಜಮ್ಮು-ಕಾಶ್ಮೀರ: ಹತ್ಯೆ, ದರೋಡೆಗಳ ತಡೆಗೆ ಸೇನೆಯಿಂದ ಬೃಹತ್ ಪ್ರಮಾಣದಲ್ಲಿ ಕೂಂಬಿಂಗ್ ಕಾರ್ಯಾಚರಣೆ

ದಕ್ಷಿಣ ಕಾಶ್ಮೀರದಲ್ಲಿ ಬ್ಯಾಂಕ್ ದರೋಡೆ ಹಾಗೂ ಸರಣಿ ಹತ್ಯೆಗಳು ನಡೆದಿರುವ ಬೆನ್ನಲ್ಲೇ ಭಾರತೀಯ ಸೇನೆ ಬೃಹತ್ ಪ್ರಮಾಣದಲ್ಲಿ ಕೂಂಬಿಂಗ್ ಕಾರ್ಯಾಚರಣೆ ಕೈಗೊಂಡಿದೆ.

ಜಮ್ಮು: ದಕ್ಷಿಣ ಕಾಶ್ಮೀರದಲ್ಲಿ ಬ್ಯಾಂಕ್ ದರೋಡೆ ಹಾಗೂ ಸರಣಿ ಹತ್ಯೆಗಳು ನಡೆದಿರುವ ಬೆನ್ನಲ್ಲೇ ಭಾರತೀಯ ಸೇನೆ ಬೃಹತ್ ಪ್ರಮಾಣದಲ್ಲಿ ಕೂಂಬಿಂಗ್ ಕಾರ್ಯಾಚರಣೆ ಕೈಗೊಂಡಿದೆ. 
ಕೂಂಬಿಂಗ್ ಕಾರ್ಯಾಚರಣೆ ನಿಯಮಿತ ಕಾರ್ಯಾಚರಣೆಯಾಗಿದ್ದು, ಹೊಸದಾಗಿ ಏನೂ ಮಾಡುತ್ತಿಲ್ಲ. ಕೆಲವು ದಿನಗಳ ಹಿಂದೆ ಬ್ಯಾಂಕ್ ನ್ನು ದರೋಡೆ ಮಾಡಲಾಗಿತ್ತು. ಪೊಲೀಸರನ್ನು ಹತ್ಯೆ ಮಾಡಲಾಗಿತ್ತು. ಆದ್ದರಿಂದ ಪರಿಸ್ಥಿತಿಯನ್ನು ಹತೋಟಿಗೆ ತರಲು ಕೂಂಬಿಂಗ್ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ವರದಿಗಾರರಿಗೆ ಸ್ಪಷ್ಟನೆ ನೀಡಿದ್ದಾರೆ. 
ಇನ್ನು ಇದೇ ವೇಳೆ ಪಾಕಿಸ್ತಾನ ಭಾರತೀಯ ಯೋಧರ ಶಿರಚ್ಛೆಧ ಮಾಡಿರುವ ಪ್ರಕರಣದ ಬಗ್ಗೆಯೂ ಜನರಲ್ ಬಿಪಿನ್ ರಾವತ್ ಪ್ರತಿಕ್ರಿಯೆ ನೀಡಿದ್ದು, ಪಾಕಿಸ್ತಾನದ ಭಯೋತ್ಪಾದಕರು ಒಳನುಸುಳದಂತೆ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. 
ಬೇಸಿಗೆ ಪ್ರಾರಂಭವಾಗಿದ್ದು ಹಿಮ ಕರಗುತ್ತಿದೆ, ಭಯೋತ್ಪಾದಕರು ಒಳನುಸುಳಲು ಯತ್ನಿಸುತ್ತಿದ್ದಾರೆ. ಆದರೆ ನಾವು ಒಳನುಸುಳುವಿಕೆಯನ್ನು ತಡೆಗಟ್ಟಲು ಕ್ರಮಗಳನ್ನು ಹೊಂದಿದ್ದೇವೆ ಎಂದು ಬಿಪಿನ್ ರಾವತ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT