ಬಿಪಿನ್ ರಾವತ್ 
ಪ್ರಧಾನ ಸುದ್ದಿ

ಸೇನೆಗೆ ಬಾಕಿ ರಕ್ಷಣಾ ವೆಚ್ಚ ಬಿಡುಗಡೆಯಾಗುತ್ತಿಲ್ಲ: ಸೇನಾ ಮುಖ್ಯಸ್ಥ ಬಿಪಿನ್ ರಾವತ್

ರಕ್ಷಣಾ ಸವಾಲುಗಳನ್ನು ಸಮರ್ಪಕವಾಗಿ ಎದುರಿಸಲು ಶೀಘ್ರದಲ್ಲೇ ರಾಷ್ಟ್ರೀಯ ಸೇನಾ ತಂತ್ರಗಾರಿಕೆ ಮತ್ತು ಭದ್ರತಾ....

ನವದೆಹಲಿ: ರಕ್ಷಣಾ ಸವಾಲುಗಳನ್ನು ಸಮರ್ಪಕವಾಗಿ ಎದುರಿಸಲು ಶೀಘ್ರದಲ್ಲೇ ರಾಷ್ಟ್ರೀಯ ಸೇನಾ ತಂತ್ರಗಾರಿಕೆ ಮತ್ತು ಭದ್ರತಾ ಚೌಕಟ್ಟನ್ನು ಅಂತಿಮಗೊಳಿಸಲಾಗುವುದು ಎಂದು ಭಾರತೀಯ ಭೂಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಗುರುವಾರ ಹೇಳಿದ್ದಾರೆ.
ರಕ್ಷಣಾ ವಿಚಾರ ಸಂಕಿರಣವನ್ನು ಉದ್ದೇಶಿಸಿ ಮಾತನಾಡಿದ ಬಿಪಿನ್ ರಾವತ್ ಅವರು, ರಕ್ಷಣಾ ಖರ್ಚು ದೇಶದಲ್ಲಿ ಅನೇಕರಿಗೆ ಹೊರೆಯಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು. ಅಲ್ಲದೆ ಸೇನೆಗೆ ಬರಬೇಕಾದ ಬಾಕಿ ವೆಚ್ಚ ಬಿಡುಗಡೆಯಾಗುತ್ತಿಲ್ಲ ಎಂದು ಹೇಳಿದ್ದಾರೆ.
ರಕ್ಷಣಾ ವಿಚಾರಕ್ಕೆ ಸಂಬಂಧಿಸಿದಂತೆ ಚೀನಾವನ್ನು ಉದಾಹರಣೆಯಾಗಿ ನೀಡಿದ ಸೇನಾ ಮುಖ್ಯಸ್ಥರು, ಆರ್ಥಿಕ ಬೆಳವಣಿಗೆ ಮತ್ತು ಶಶಸ್ತ್ರ ಪಡೆಗಳ ಶಕ್ತಿ ಎರಡೂ ಪ್ರಬಲವಾಗಿದ್ದಾಗ ಮಾತ್ರ ಭಾರತದ ನೈಜ ಸಾಮರ್ಥ್ಯವನ್ನು ತೋರಿಸಲು ಸಾಧ್ಯ ಎಂದು ಒತ್ತಿ ಹೇಳಿದ್ದಾರೆ.
ಪಶ್ಚಿಮ ಮತ್ತು ಉತ್ತರದ ಗಡಿಯುದ್ದಕ್ಕೂ ನೆರೆಯ ಪಾಕಿಸ್ತಾನ ಮತ್ತು ಚೀನಾವನ್ನು ಎದುರಿಸಲು ಭಾರತ ಹೊಸ ಸ್ನೇಹಿತರನ್ನು ಮತ್ತು ಮಿತ್ರರಾಷ್ಟ್ರಗಳನ್ನು ನೋಡಿಕೊಳ್ಳಬೇಕು ಎಂದು ಬಿಪಿನ್ ರಾವತ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT