ಆಮ್ ಆದ್ಮಿ ಪಕ್ಷ 
ಪ್ರಧಾನ ಸುದ್ದಿ

ಆಮ್ ಆದ್ಮಿ ಪಕ್ಷದ ಪಂಜಾಬ್ ಘಟಕ ವಿಸರ್ಜನೆ: ನಾಯಕರಿಂದ ಒಗ್ಗಟ್ಟು ಪ್ರದರ್ಶನ

ಆಮ್ ಆದ್ಮಿ ಪಕ್ಷ ತನ್ನ ಪಂಜಾಬ್ ನ ಘಟಕವನ್ನು ವಿಸರ್ಜನೆ ಮಾಡಿದ್ದು, ಪಂಜಾಬ್ ನ ಆಪ್ ನಾಯಕರು ಒಗ್ಗಟ್ಟು ಪ್ರದರ್ಶಿಸಿದ್ದಾರೆ.

ಚಂಡೀಗಢ: ಆಮ್ ಆದ್ಮಿ ಪಕ್ಷ ತನ್ನ ಪಂಜಾಬ್ ನ ಘಟಕವನ್ನು ವಿಸರ್ಜನೆ ಮಾಡಿದ್ದು, ಪಂಜಾಬ್ ನ ಆಪ್ ನಾಯಕರು ಒಗ್ಗಟ್ಟು ಪ್ರದರ್ಶಿಸಿದ್ದಾರೆ. 
ಪಂಜಾಬ್ ಗೆ ಹೊಸದಾಗಿ ನೇಮಕಗೊಂಡಿರುವ ರಾಜ್ಯಾಧ್ಯಕ್ಷ ಭಗವಂತ್ ಮಾನ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಂಜಾಬ್ ಘಟಕವನ್ನು ವಿಸರ್ಜಿಸಲು ನಿರ್ಧರಿಸಲಾಗಿದೆ. ಸಭೆಯಲ್ಲಿ ಪಂಜಾಬ್ ನ 20 ಶಾಸಕರು ವಿಭಾಗೀಯ ಸಹ-ಸಂಯೋಜಕರು ಭಾಗಿಯಾಗಿದ್ದರು. 
ಸಭೆಯ ಬಗ್ಗೆ ಮಾಹಿತಿ ನೀಡಿರುವ ಪಕ್ಷದ ವಕ್ತಾರ " ಪಂಜಾಬ್ ವಿಧಾನಸಭಾ ಚುನಾವಣೆಯ ಬಗ್ಗೆ ಸಕಾರಾತ್ಮಕ ಹಾಗೂ ಋಣಾತ್ಮಕ ಪ್ರತಿಕ್ರಿಯೆ ಪಡೆದು ಚರ್ಚೆ ನಡೆಸಲಾಯಿತು. ಪಕ್ಷದ ಸಹ ಅಧ್ಯಕ್ಷರಾದ ಅಮಾನ್ ಅರೋರಾ ಅವರು ಮೇ.18 ರಿಂದ ಪ್ರವಾಸ ಕೈಗೊಳ್ಳಲಿದ್ದು ಪದಾಧಿಕಾರಿಗಳನ್ನು ಭೇಟಿ ಮಾಡಿ ಹೊಸ ಪದಾಧಿಕಾರಿಗಳ ನೇಮಕದ ಬಗ್ಗೆ ಸಲಹೆ ಕೇಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. 
ಪಕ್ಷ ವಿರೋಧಿ ಚಟುವಟಿಕೆಗಳನ್ನು ಗಮನಿಸಲು ಪಕ್ಷ ಶಿಸ್ತು ಸಮಿತಿಯನ್ನು ರಚಿಸಲು ನಿರ್ಧರಿಸಿದೆ. ಮಾಧ್ಯಮ, ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಇನ್ನಿತರ ವೇದಿಕೆಗಳಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸುವವರ ಬಗ್ಗೆ ಈ ಸಮಿತಿ ನಿಗಾ ವಹಿಸಲಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ. 
ಇದೇ ವೇಳೆ ಆಮ್ ಆದ್ಮಿ ಪಕ್ಷವನ್ನು ಕುಗ್ಗಿಸಲು ಕಾಂಗ್ರೆಸ್, ಶಿರೋಮಣಿ ಅಕಾಲಿ ದಳ ಹಾಗೂ ಬಿಜೆಪಿ ರೂಪಿಸಿರುವ ಷಡ್ಯಂತ್ರಗಳು ಪಕ್ಷದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಆಪ್ ನ ಸಂಸದ, ಪಂಜಾಬ್ ರಾಜ್ಯಾಧ್ಯಕ್ಷ ಭಗವಂತ್ ಮಾನ್ ಮಾಧ್ಯಮಗಳಿಗೆ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT