ಮುಖ್ಯಮಂತ್ರಿ ಸಿದ್ದರಾಮಯ್ಯ 
ಪ್ರಧಾನ ಸುದ್ದಿ

ಸರ್ಕಾರಿ ಜಾಗದಲ್ಲಿರುವ ಅಕ್ರಮ ಮನೆ ಸಕ್ರಮಕ್ಕೆ ಸಚಿವ ಸಂಪುಟ ಅಸ್ತು

ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿರುವ ವಾಸದ ಮನೆಗಳನ್ನು ಸಕ್ರಮ ಮಾಡಲು ಬುಧವಾರ ರಾಜ್ಯ....

ಬೆಂಗಳೂರು: ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿರುವ ವಾಸದ ಮನೆಗಳನ್ನು ಸಕ್ರಮ ಮಾಡಲು ಬುಧವಾರ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಮಹಾನಗರ ಪಾಲಿಕೆಯ ಕೇಂದ್ರ ಸ್ಥಾನದಿಂದ 18 ಕಿ.ಮೀ ವ್ಯಾಪ್ತಿಯ ಹೊರಗಿರುವ  ವಾಸದ ಮನೆ, ನಗರ ಸಭೆ ಕೇಂದ್ರ ಸ್ಥಾನದಿಂದ 5ಕಿ.ಮೀ ವ್ಯಾಪ್ತಿಯ ಹೊರಗಿರುವ ವಾಸದ ಮನೆ ಹಾಗೂ ಪ.ಪಂ, ಪುರಸಭೆ ಕೇಂದ್ರ ಸ್ಥಾನದಿಂದ 3 ಕಿ.ಮೀ ವ್ಯಾಪ್ತಿಯ ಹೊರಗಿರುವ ವಾಸದ ಮನೆಯನ್ನ ಸಕ್ರಮಗೊಳಿಸಲು ನಿರ್ಧರಿಸಲಾಗಿದೆ.
ಅಕ್ರಮ ಮನೆಗಳ ಸಕ್ರಮಕ್ಕೆ 5 ಸಾವಿರ ದಂಡ ವಿಧಿಸಲು ಸಚಿವ ಸಂಪುಟ ನಿರ್ಧರಿಸಿದ್ದು, ಇದಕ್ಕಾಗಿ 10 ಲಕ್ಷ ಫಲಾನುಭವಿಗಳನ್ನು ಗುರುತಿಸುವ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.
ಇನ್ನು ಶಿವಮೊಗ್ಗ ಕೃಷಿ ವಿವಿಯ ಹೊಸ ಕ್ಯಾಂಪಸ್ ನ್ನು ಇರುವಕ್ಕಿ ಎಂಬಲ್ಲಿ ಸ್ಥಾಪಿಸಲು ಟೆಂಡರ್ ಗೆ ಒಪ್ಪಿಗೆ ಸೂಚಿಸಲಾಗಿದೆ. ಇದು 138 ಕೋಟಿ 69 ಲಕ್ಷ  ವೆಚ್ಚದ ಕಾಮಗಾರಿಯಾಗಿದೆ.
ಪರಮಪ್ಪ ಕೆಂದಾಟೆ ಎಂಬ ಮುಖ್ಯ ಶಿಕ್ಷಕ ಮೂರು ಸಾವಿರ ರೂಪಾಯಿ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದು ಉಪಲೋಕಾಯುಕ್ತರ ಶಿಫಾರಸ್ಸಿನ ಮೇರೆಗೆ  ಪರಮಪ್ಪರನ್ನ  ವಜಾ ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಸಿದ್ದು-ಡಿಕೆಶಿ, ಹರಿಪ್ರಸಾದ್'ಗೆ 'ಕೈ' ಕಮಾಂಡ್ ಬುಲಾವ್, ದೆಹಲಿಯಲ್ಲಿ ನಿರ್ಣಾಯಕ ಸಭೆ..!

ಮೈಸೂರಿನಲ್ಲಿ ಎಸ್. ಜಾನಕಿ ಪಾರ್ಥಿವ ಶರೀರದ ಅಂತಿಮ ದರ್ಶನ; ಮಧ್ಯಾಹ್ನ ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ

ಸಾರಿಗೆ ಸಚಿವ byrati suresh ದಿಢೀರ್ ಸಿಟಿ ರೌಂಡ್ಸ್, ರಾತ್ರೋರಾತ್ರಿ BMTC ಚಾಲಕ, ನಿರ್ವಾಹಕರಿಗೆ ಅಮಾನತು ಶಾಕ್, Video