ಸಂಗ್ರಹ ಚಿತ್ರ 
ಪ್ರಧಾನ ಸುದ್ದಿ

ಎನ್ಎಸ್ ಜಿ ಸದಸ್ಯತ್ವ ಸಿಗದಿದ್ದರೆ ರಷ್ಯಾ ಜೊತೆಗಿನ ಅಣು ಒಪ್ಪಂದ ರದ್ದು?: ಭಾರತದ ಚಾಣಕ್ಷ ನಡೆ

ಭಾರತದ ಎನ್ಎಸ್ ಜಿ ಸದಸ್ಯತ್ವಕ್ಕೆ ಬೆಂಬಲ ನೀಡುವಂತೆ ಚೀನಾವನ್ನು ಮನವೊಲಿಸಿ ಇಲ್ಲದಿದ್ದರೆ ಉಭಯ ದೇಶಗಳ ನಡುವಿನ ಅಣು ಒಪ್ಪಂದವನ್ನು ರದ್ದುಗೊಳಿಸುವುದಾಗಿ ಭಾರತ ರಷ್ಯಾ ಮೇಲೆ ಒತ್ತಡ ಹೇರಿದೆ.

ನವದೆಹಲಿ: ಭಾರತದ ಎನ್ಎಸ್ ಜಿ ಸದಸ್ಯತ್ವಕ್ಕೆ ಬೆಂಬಲ ನೀಡುವಂತೆ ಚೀನಾವನ್ನು ಮನವೊಲಿಸಿ ಇಲ್ಲದಿದ್ದರೆ ಉಭಯ ದೇಶಗಳ ನಡುವಿನ ಅಣು ಒಪ್ಪಂದವನ್ನು ರದ್ದುಗೊಳಿಸುವುದಾಗಿ ಭಾರತ ರಷ್ಯಾ ಮೇಲೆ ಒತ್ತಡ ಹೇರಿದೆ.

ಇತ್ತೀಚೆಗೆ ಚೀನಾದ ಬೀಜಿಂಗ್ ನಲ್ಲಿ ನಡೆದ ಒನ್ ಬೆಲ್ಟ್ ಒನ್ ರೋಡ್ (ಒಬಿಒಆರ್) ಯೋಜನೆಗೆ ಪರ್ಯಾಯವಾಗಿ ಜಪಾನ್ ಸಹಯೋಗದೊಂದಿಗೆ ಫ್ರೀಡಂ ಕಾರಿಡಾರ್ ಯೋಜನೆ ಸಾಕಾರಕ್ಕೆ ಮುನ್ನುಡಿ ಬರೆದು ಚೀನಾಗೆ ಸೆಡ್ಡು ಹೊಡೆದಿದ್ದ, ಭಾರತ ಈಗ ವಿಶ್ವದ ಪರಮಾಣು ಪೂರೈಕೆದಾರರ ಗುಂಪು (ಎನ್​ಎಸ್​ಜಿ) ಸದಸ್ಯತ್ವ ಗಿಟ್ಟಿಸಿಕೊಳ್ಳುವ ನಿಟ್ಟಿನಲ್ಲೂ ಇಂಥದ್ದೇ ಮಹತ್ವದ ರಣತಂತ್ರ ರೂಪಿಸಿದೆ.

ಮೂಲಗಳ ಪ್ರಕಾರ ಎನ್​ಎಸ್​ ಜಿ ಕನಸನ್ನು ನನಸಾಗಿಸಿಕೊಳ್ಳುವುದಕ್ಕಾಗಿ ತನ್ನ ಪರಮಾಪ್ತ ರಾಷ್ಟ್ರ ರಷ್ಯಾದ ಮೇಲೆ ಭಾರತ ಪ್ರಬಲ ಒತ್ತಡ ಹೇರಿದೆ. ಇತ್ತೀಚಿನ ದಿನಗಳಲ್ಲಿ ರಷ್ಯಾ ಚೀನಾದೊಂದಿಗೆ ಹೆಚ್ಚು ಸ್ನೇಹ ಹೊಂದಿದ್ದು. ಜಾಗತಿಕ ವಿಷಯಗಳಿಗೆ ಸಂಬಂಧಿಸಿದಂತೆ ಚೀನಾವನ್ನು ಬಹಿರಂಗವಾಗಿಯೇ ಬೆಂಬಲಿಸುತ್ತಿದೆ. ಹೀಗಾಗಿ ಭಾರತದ ಎನ್ ಎಸ್ ಜಿ ಸದಸ್ಯತ್ವಕ್ಕೆ ಬೆಂಬಲ ನೀಡುವಂತೆ ಚೀನಾ ಮೇಲೆ ಒತ್ತಡ ಹೇರುವಂತೆ ರಷ್ಯಾ ಮೇಲೆ ಭಾರತ ಒತ್ತಡ ಹೇರುತ್ತಿದೆ. ಎನ್​ಎಸ್​ಜಿ ಸದಸ್ಯತ್ವಕ್ಕೆ ಬೆಂಬಲ ನೀಡದಿದ್ದಲ್ಲಿ ತಮಿಳುನಾಡಿನ ಕೂಡಂಕೂಳಂನ ಅಣು ವಿದ್ಯುತ್ ಘಟಕಗಳ 5 ಹಾಗೂ 6ನೇ ಹಂತದ ಒಪ್ಪಂದದಿಂದ ಹಿಂದೆ ಸರಿಯುವುದಾಗಿಯೂ ಭಾರತ ನೇರ ಎಚ್ಚರಿಕೆ ರವಾನಿಸಿದೆ.

5 ಮತ್ತು 6ನೇ ಘಟಕದ ಸಹಿಗೆ ವಿಳಂಬ ಸಾಧ್ಯತೆ
ರಷ್ಯಾ ಮೇಲೆ ಒತ್ತಡ ಹೇರುವ ಸಲುವಾಗಿ ಭಾರತ 5 ಹಾಗೂ 6ನೇ ಹಂತದ ಒಪ್ಪಂದಕ್ಕೆ ಸಹಿ ಹಾಕಲು ವಿಳಂಬ ಮಾಡುತ್ತಿದೆ. ಈ ಸಂಬಂಧ ರಷ್ಯಾ ಸರ್ಕಾರಕ್ಕೂ ಅಧಿಕೃತವಾಗಿ ಮಾಹಿತಿ ನೀಡಿರುವ ಭಾರತ ಎನ್​ಎಸ್ ​ಜಿ ಸದಸ್ಯತ್ವಕ್ಕೆ ಬೆಂಬಲ ಸಿಗದಿದ್ದಲ್ಲಿ ದೇಶೀಯವಾಗಿಯೇ ಯೋಜನೆ ಮುಂದುವರಿಸಲು ನಿರ್ಧರಿಸಿದೆ ಎನ್ನಲಾಗಿದೆ. ಹೀಗಾಗಿ ಭಾರತದ ಈ ದಿಢೀರ್ ನಡೆಯಿಂದಾಗಿ ರಷ್ಯಾ ಅಕ್ಷರಶಃ ಒತ್ತಡಕ್ಕೆ ಸಿಲುಕಿದ್ದು, ರಷ್ಯಾ ಸರ್ಕಾರಕ್ಕೂ ಭಾರತ ಕೂಡಂಕೂಳಂ ಯೋಜನೆ ಒಪ್ಪಂದವನ್ನು ವಿಳಂಬ ಮಾಡುತ್ತಿರುವ ಬಗ್ಗೆ ಮನವರಿಕೆ ಆಗಿದೆ. ಹೀಗಾಗಿಯೇ ಆತಂಕದಿಂದ ಭಾರತದೊಂದಿಗೆ ಮಾತುಕತೆಗೆ ಮುಂದಾಗಿದೆ. ಕಳೆದ ವಾರವಷ್ಟೇ ರಷ್ಯಾ ಉಪ ಪ್ರಧಾನಮಂತ್ರಿ ಡಿಮಿಟ್ರಿ ರೋಗೋಜಿನ್ ಭಾರತ ಪ್ರಧಾನಿ ನರೇಂದ್ರ ಮೋದಿಯೊಂದಿಗೆ ಚರ್ಚೆ ನಡೆಸಿದ್ದಾರೆ. ಆದರೆ ಒಪ್ಪಂದಕ್ಕೆ ಅಂಕಿತ ಹಾಕುವ ಕುರಿತು ಭಾರತದಿಂದ ಸ್ಪಷ್ಟ ಭರವಸೆ ದೊರೆತಿಲ್ಲ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT