ನಜೀಂ ಜೈದಿ 
ಪ್ರಧಾನ ಸುದ್ದಿ

ಚುನಾವಣಾ ಆಯೋಗ ನಡೆಸಿದ ಇವಿಎಂ, ವಿವಿಪ್ಯಾಟ್ ಪ್ರಾತ್ಯಕ್ಷಿಕೆ ಯಶಸ್ವಿ, ಮತಯಂತ್ರ ತಿರುಚಲು ಅಸಾಧ್ಯ

ಕೇಂದ್ರ ಚುನಾವಣಾ ಆಯೋಗ ಶನಿವಾರ ನಡೆಸಿದ ವಿದ್ಯುನ್ಮಾನ ಮತಯಂತ್ರ(ಇವಿಎಂ) ಹಾಗೂ ವಿವಿಪ್ಯಾಟ್‌....

ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಶನಿವಾರ ನಡೆಸಿದ ವಿದ್ಯುನ್ಮಾನ ಮತಯಂತ್ರ(ಇವಿಎಂ) ಹಾಗೂ ವಿವಿಪ್ಯಾಟ್‌ (VVPAT–voter verifiable paper audit trail) ಪ್ರಾತ್ಯಕ್ಷಿಕೆ ಯಶಸ್ವಿಯಾಗಿದ್ದು, ಈ ಮೂಲಕ ಮತಯಂತ್ರಗಳಲ್ಲಿನ ದೋಷದಿಂದಾಗಿಯೇ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ ಎಂಬ ಪ್ರತಿಪಕ್ಷಗಳ ಗಂಭೀರ ಆರೋಪಕ್ಕೆ ತೆರೆ ಎಳೆಯಲಾಗಿದೆ.
ಇವಿಎಂ ತಿರುಚಲಾಗಿದೆ ಎಂದು ಆರೋಪ ಮಾಡುವುದು ತಪ್ಪು ಎಂದು ಪ್ರಾತ್ಯಕ್ಷಿಕೆ ನಡೆಸಿದ ಭಾರತೀಯ ವಿದ್ಯುನ್ಮಾನ ನಿಗಮ ಲಿಮಿಟೆಡ್(ಇಸಿಐಎಲ್) ನ ತಾಂತ್ರಿಕ ಅಧಿಕಾರಿ ಬಿ.ಪಿ.ಮಿಶ್ರ ಅವರು ಹೇಳಿದ್ದಾರೆ.
ಇವಿಎಂ ತಿರುಚಲು ಸಾಧ್ಯವೇ ಇಲ್ಲ. ಇವಿಎಂ ತಿರುಚಲಾಗಿದೆ ಎಂದು ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದು ಮಿಶ್ರಾ ಅವರು ಎಎನ್ಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಈ ಮಷಿನ್ ಗಳಿಗೆ ಸ್ವಯಂಚಾಲಿತ ಪ್ರಿಂಟರ್ ಇದ್ದು, ಮತದಾರ ಬಟನ್ ಒತ್ತಿದ ಕೂಡಲೇ ಮತದಾರ ಹಾಗೂ ಅಭ್ಯರ್ಥಿಯ ಹೆಸರಿರುವ ಚೀಟಿ ಬರುತ್ತದೆ ಎಂದು ಪ್ರಾತ್ಯಕ್ಷಿಕೆ ನಡೆಸಿದ ಮತ್ತೊಬ್ಬ ಇಸಿಐಎಲ್ ನೌಕರ ಖರೇಶ್ ಯಾದವ್ ಅವರು ತಿಳಿಸಿದ್ದಾರೆ.
ಇನ್ನು ಅತ್ಯಾಧುನಿಕ ತಂತ್ರಜ್ಞಾನ ಬಳಿ ಇವಿಎಂಗಳನ್ನು ಸಿದ್ಧಪಡಿಸಲಾಗಿದ್ದು, ಇವುಗಳನ್ನು ತಿರುಚಲ ಸಾಧ್ಯವಿಲ್ಲ. ಒಂದು ವೇಳೆ ಸಾಧ್ಯವಿದೆ ಎನ್ನುವದಾದರೆ ಜೂನ್ 3ರಿಂದ ಹ್ಯಾಕ್ ಮಾಡಿ ತೋರಿಸುವಂತೆ ಮುಖ್ಯ ಚುನಾವಣಾ ಆಯುಕ್ತ ನಜೀಂ ಜೈದಿ ಅವರು ಸವಾಲು ಹಾಕಿದ್ದಾರೆ.
ಇತ್ತೀಚೆಗೆ ಮುಕ್ತಾಯಗೊಂಡಿದ್ದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಜಯಗಳಿಸಿದ್ದ ಬೆನ್ನಲ್ಲೇ ಆಮ್ ಆದ್ಮಿ ಪಕ್ಷ ಮತಯಂತ್ರಗಳಲ್ಲಿ ವ್ಯಾಪಕ ಅಕ್ರಮ ನಡೆದಿದ್ದು. ದೋಷಪೂರಿತ ಮತಯಂತ್ರಗಳಿಂದ ಬಿಜೆಪಿಗೆ ಹೆಚ್ಚಿನ  ಮತಗಳು ಲಭಿಸಿವೆ. ಮತಯಂತ್ರದ ಯಾವುದೇ ಬಟನ್ ಒತ್ತಿದರೂ ಬಿಜೆಪಿಗೆ ಮತ ಬೀಳುವಂತೆ ರಚಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿತ್ತು. ಇದಕ್ಕೆ ಬಿಎಸ್ಪಿ, ತೃಣಮೂಲ ಕಾಂಗ್ರೆಸ್ ಸೇರಿದಂತೆ ವಿವಿಧ ಪ್ರತಿಪಕ್ಷಗಳು ಬೆಂಬಲ  ನೀಡಿ ಮತ್ತೆ ಈ ಹಿಂದಿನ ಬ್ಯಾಲಟ್ ಪೇಪರ್ ವ್ಯವಸ್ಥೆಯನ್ನು ತರುವಂತೆ ಆಗ್ರಹಿಸಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT