ಅರುಣ್ ಜೇಟ್ಲಿ-ಅರವಿಂದ್ ಕೇಜ್ರಿವಾಲ್ 
ಪ್ರಧಾನ ಸುದ್ದಿ

ಜೇಟ್ಲಿ ಹೊಸ ಮಾನಹಾನಿ ಪ್ರಕರಣ: ಕೇಜ್ರಿವಾಲ್ ಗೆ ನೋಟಿಸ್ ನೀಡಿದ ಹೈಕೋರ್ಟ್

ಅರವಿಂದ್ ಕೇಜ್ರಿವಾಲ್ ಅವರ ವಕೀಲ ರಾಮ್ ಜೇಟ್ಮಲಾನಿ ತಮ್ಮ ವಿರುದ್ಧ 'ಮೋಸಗಾರ' ಎಂಬ ಪದ ಬಳಸಿರುವುದಕ್ಕೆ, ದೆಹಲಿ ಮುಖ್ಯಮಂತ್ರಿ ವಿರುದ್ಧ ಮತ್ತೊಂದು ಮಾನಹಾನಿ ಪ್ರಕರಣ ದಾಖಲಿಸಿರುವ ಕೇಂದ್ರ

ನವದೆಹಲಿ: ಅರವಿಂದ್ ಕೇಜ್ರಿವಾಲ್ ಅವರ ವಕೀಲ ರಾಮ್ ಜೇಟ್ಮಲಾನಿ ತಮ್ಮ ವಿರುದ್ಧ 'ಮೋಸಗಾರ' ಎಂಬ ಪದ ಬಳಸಿರುವುದಕ್ಕೆ, ದೆಹಲಿ ಮುಖ್ಯಮಂತ್ರಿ ವಿರುದ್ಧ ಮತ್ತೊಂದು ಮಾನಹಾನಿ ಪ್ರಕರಣ ದಾಖಲಿಸಿರುವ ಕೇಂದ್ರ ಸಚಿವ ಅರುಣ್ ಜೇಟ್ಲಿ ೧೦ ಕೋಟಿ ರೂ ಪರಿಹಾರ ಕೇಳಿದ್ದಾರೆ. ಈ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಕೇಜ್ರಿವಾಲ್ ಅವರಿಗೆ ನೋಟಿಸ್ ನೀಡಿದೆ. 
ಜಂಟಿ ರಿಜಿಸ್ಟಾರ್ ಪಂಕಜ್ ಗುಪ್ತ ಕೇಜ್ರಿವಾಲ್ ಅವರಿಗೆ ನೋಟಿಸ್ ನೀಡಿದ್ದು, ಈ ಪ್ರಕರಣದ ವಿಚಾರಣೆಯನ್ನು ಜುಲೈ ೨೬ ಕ್ಕೆ ಪಟ್ಟಿ ಮಾಡಿದ್ದಾರೆ. 
ಕೇಜ್ರಿವಾಲ್ ವಿರುದ್ಧ ದಾಖಲಿಸಿರುವ ಈ ಎರಡನೇ ನಾಗರಿಕ ಮಾನಹಾನಿ ಪ್ರಕರಣದಲ್ಲಿ ಜೇಟ್ಲಿ, ಆಕ್ಷೇಪಾರ್ಹ ಪದಗಳ ಬಳಕೆಯಿಂದ ತಮಗೆ 'ಶಾಶ್ವತ ಹಾನಿ ಮತ್ತು ಅಗೌರವ' ಉಂಟಾಗಿದೆ ಎಂದು ದೂರಿದ್ದಾರೆ.
ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಮಿತಿಯಲ್ಲಿ (ಡಿಡಿಸಿಎ) ಅರುಣ್ ಜೇಟ್ಲಿ ಅಕ್ರಮ ಎಸಗಿದ್ದಾರೆ ಎಂದು ಕೇಜ್ರಿವಾಲ್ ದೂರಿದ್ದಕ್ಕೆ ಈ ಹಿಂದೆ ಅವರ ಮತ್ತು ಐವರು ಆಮ್ ಆದ್ಮಿ ಪಕ್ಷದ ವಿರುದ್ಧ ೨೦೧೫ ರಲ್ಲಿ ಜೇಟ್ಲಿ ಮಾನಹಾನಿ ಪ್ರಕರಣ ದಾಖಲಿಸಿದ್ದರು. ಇದು ಸದ್ಯಕ್ಕೆ ಕೋರ್ಟ್ ನಲ್ಲಿ ವಿಚಾರಣೆಯಲ್ಲಿದೆ. 
ಮೇ ೧೭ ರಂದು ನಡೆದ ಪ್ರತ್ಯಾರೋಪ ವಿಚಾರಣೆಯಲ್ಲಿ ಹಿರಿಯ ವಕೀಲ ಜೇಟ್ಮಲಾನಿ ತಮ್ಮ ವಿರುದ್ಧ 'ಮೋಸಗಾರ' ಎಂಬ ಪದ ಬಳಸಿದ್ದಕ್ಕೆ ಜೇಟ್ಲಿ ಆಕ್ಷೇಪ ವ್ಯಕ್ತಪಡಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT