ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಭಯೋತ್ಪಾದನೆ ವಿರುದ್ಧ ಪ್ರತೀಕಾರ ದಾಳಿ; ಭಾರತೀಯ ಸೇನೆಯಿಂದ ಪಾಕಿಸ್ತಾನ ಸೇನಾ ನೆಲೆಗಳ ನಾಶ

ಪಾಕಿಸ್ತಾನ ಪ್ರೇರೇಪಿತ ಭಯೋತ್ಪಾದನಾ ಕೃತ್ಯಗಳಿಗೆ ಪ್ರತೀಕಾರವಾಗಿ ಗಡಿನಿಯಂತ್ರಣ ರೇಖೆಯಲ್ಲಿ ದಾಳಿ ನಡೆಸಿದ ಭಾರತೀಯ ಸೇನೆ ನೌಶೇರಾ ಸೆಕ್ಟರ್ ನ ಪಾಕಿಸ್ತಾನದ ಹಲವು ಸೇನಾ ನೆಲೆಗಳಿಗೆ...

ನವದೆಹಲಿ: ಪಾಕಿಸ್ತಾನ ಪ್ರೇರೇಪಿತ ಭಯೋತ್ಪಾದನಾ ಕೃತ್ಯಗಳಿಗೆ ಪ್ರತೀಕಾರವಾಗಿ ಗಡಿನಿಯಂತ್ರಣ ರೇಖೆಯಲ್ಲಿ ದಾಳಿ ನಡೆಸಿದ ಭಾರತೀಯ ಸೇನೆ ಪಾಕಿಸ್ತಾನದ ನೌಶೇರಾ ಸೆಕ್ಟರ್ ನ ಹಲವು ಸೇನಾ ನೆಲೆಗಳಿಗೆ ಹಾನಿಯುಂಟುಮಾಡಿದೆ. ಈ ಸ್ಥಳದಿಂದ ಉಗ್ರರು ನುಸುಳಲು ಪಾಕಿಸ್ತಾನ ಅನುವುಮಾಡಿಕೊಡುತ್ತಿತ್ತು. 
ಈ ದಾಳಿಯ ನಿಖರವಾದ ಸಮಯವನ್ನು ತಿಳಿಸದ ಮೇಜರ್ ಜನರಲ್ ಅಶೋಕ್ ನರುಲಾ, ಸೇನೆಯ ಈ ಕ್ರಮ ಪಾಕಿಸ್ತಾನದ ನೆಲೆಗಳಲ್ಲಿ ಭಾರಿ ಹಾನಿಯುಂಟು ಮಾಡಿದೆ ಎಂದಿದ್ದಾರೆ. 
ಭಾರತೀಯ ಸೇನೆ ನಡೆಸಿದ ಫಿರಂಗಿ ದಾಳಿಗೆ ಪಾಕಿಸ್ತಾನಿ ಸೇನೆಯ ಬಂಕರ್ ಗಳು ಕೂಡ ಹಾನಿಗೊಂಡಿವೆ ಎಂದು ತಿಳಿಯಲಾಗಿದೆ. 
ಪಾಕಿಸ್ತಾನ ಸೇನೆ ಗಡಿ ನಿಯಂತ್ರಣ ರೇಖೆಯಲ್ಲಿ ಭಯೋತ್ಪಾದಕರು ನುಸುಳಲು ಸಹಕರಿಸುತ್ತಲೇ ಇದ್ದು, ಮುಂದಿನ ದಿನಗಳಲ್ಲಿ ಎತ್ತರದ ಸ್ಥಾನಗಳಲ್ಲಿ ಹಿಮ ಕರಗುವುದರಿಂದ ಇದು ಹೆಚ್ಚಳಗೊಳ್ಳಲಿದೆ ಎನ್ನಲಾಗಿದೆ. 
"ಗಡಿ ನಿಯಂತ್ರಣ ರೇಖೆಯಲ್ಲಿ ನುಸುಳುವಿಕೆಯನ್ನು ತಡೆಗಟ್ಟುವ ಭಯೋತ್ಪಾದಕ ವಿರೋಧಿ ತಂತ್ರಗಾರಿಕೆಯ ಭಾಗವಾಗಿ ಈ ದಾಳಿ ನಡೆದಿದೆ" ಎಂದು ಮೇಜರ್ ಜನರಲ್ ನರುಲಾ ಹೇಳಿದ್ದಾರೆ. 
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ, ವಿಷೇಧ ಕಮಾಂಡೋ ಪಡೆಗಳು ನಿರ್ಧಿಷ್ಟ ದಾಳಿ ನಡೆಸಿ ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಿದ ಒಂಭತ್ತು ತಿಂಗಳ ನಂತರ ಈಗ ಭಾರತೀಯ ಸೇನೆ ಪಾಕಿಸ್ತಾನದ ನೆಲದ ಮೇಲೆ ಈ ದಾಳಿ ನಡಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT