ಶರತ್ ಕುಮಾರ್- ಸೂರ್ಯ - ಸತ್ಯರಾಜ್ 
ಪ್ರಧಾನ ಸುದ್ದಿ

ಮಾನಹಾನಿ ಪ್ರಕರಣ: 'ಕಟ್ಟಪ್ಪ', ಸೂರ್ಯ ಸೇರಿ 8 ತಮಿಳು ನಟರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ತಮಿಳು ಚಿತ್ರ ನಟರಾದ ಸೂರ್ಯ, ಬಾಹುಬಲಿಯ ಕಟ್ಟಪ್ಪ ಪಾತ್ರಧಾರಿ....

ಕೊಯಮತ್ತೂರು: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ತಮಿಳು ಚಿತ್ರ ನಟರಾದ ಸೂರ್ಯ, ಬಾಹುಬಲಿಯ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ಹಾಗೂ ಶರತ್ ಕುಮಾರ್ ಸೇರಿದಂತೆ ಎಂಟು ತಮಿಳು ನಟರ ವಿರುದ್ಧ ಊಟಿ ಕೋರ್ಟ್ ಮಂಗಳವಾರ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ.
ತಮಿಳು ನಟರ ವಿರುದ್ಧ ಹಿರಿಯ ಪತ್ರಕರ್ತರೊಬ್ಬರು ದಾಖಲಿಸಿದ್ದ ಮಾನಹಾನಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗದ ಸೂರ್ಯ, ಸತ್ಯರಾಜ್, ಶರತ್ ಕುಮಾರ್, ಚೇರನ್, ಶ್ರೀಪ್ರಿಯಾ, ವಿಜಯ್ ಕುಮಾರ್, ಅರುಣ್ ವಿಜಯ್ ಹಾಗೂ ವಿವೇಕ್ ಅವರ ವಿರುದ್ಧ ಕೋರ್ಟ್ ಇಂದು ಬಂಧನ ವಾರಂಟ್ ಹೊರಡಿಸುವ ಮೂಲಕ ಬಿಸಿ ಮುಟ್ಟಿಸಿದೆ.
ಪ್ರಕರಣ ಸಂಬಂಧ ಎರಡನೇ ಬಾರಿಯೂ ವಿಚಾರಣೆಗೆ ಹಾಜರಾಗದ ತಮಿಳು ನಟರ ವಿರುದ್ಧ ಊಟಿ ಜೂಡಿಸಿಯಲ್ ಮಾಜಿಸ್ಟ್ರೇಟ್ ಸೆಂತಿಲ್ ಕುಮಾರ್ ರಾಜವೇಲ್ ಅವರು ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದ್ದಾರೆ.
ತಮಿಳು ಚಿತ್ರರಂಗದ ನಟಿಯರ ಮಾನಹಾನಿ ಮಾಡುವಂತಹ ಲೇಖನ ಪ್ರಕಟಿಸಿದ್ದ ತಮಿಳು ದೈನಿಕದ ವಿರುದ್ಧ 2009ರ ಅಕ್ಟೋಬರ್ 7ರಂದು ದಕ್ಷಿಣ ಭಾರತ ನಟರ ಅಸೋಸಿಯೇಶನ್(ನಾಡಿಗರ್ ಸಂಘಂ) ಚೆನ್ನೈನಲ್ಲಿ ಸಭೆ ನಡೆಸಿ ವಿರೋಧ ವ್ಯಕ್ತಪಡಿಸಿತ್ತು. ಈ ವೇಳೆ ತಮಿಳು ನಟರು ತಮ್ಮ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಹಿರಿಯ ಪತ್ರಕರ್ತ ರೋಜರಿಯೋ ಮರಿಯಾ ಸುಸೈ ಅವರು ಖಾಸಗಿ ದೂರು ದಾಖಲಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT