ಜೋಗ್ ಫಾಲ್ಸ್ 
ಪ್ರವಾಸ-ವಾಹನ

ಬಣಗುಡುತ್ತಿದ್ದ ಜೋಗಕ್ಕೆ ಬಿರು ಬೇಸಿಗೆಯಲ್ಲೂ ಜೀವಕಳೆ!

ನೀರಿಲ್ಲದೆ ಇಷ್ಟು ದಿನ ಸೊರಗಿದ್ದ ವಿಶ್ವವಿಖ್ಯಾತ ಜೋಗ ಜಲಪಾತ ಬಿರು ಬೇಸಿಗೆಯಲ್ಲೂ ಮೈದುಂಬಿ ಧುಮ್ಮಿಕ್ಕುತ್ತಿದೆ. 293 ಮೀಟರ್ ಎತ್ತರದಿಂದ ಧುಮ್ಮಿಕ್ಕುವ...

ಶಿವಮೊಗ್ಗ: ನೀರಿಲ್ಲದೆ ಇಷ್ಟು ದಿನ ಸೊರಗಿದ್ದ ವಿಶ್ವವಿಖ್ಯಾತ ಜೋಗ ಜಲಪಾತ ಬಿರು ಬೇಸಿಗೆಯಲ್ಲೂ ಮೈದುಂಬಿ ಧುಮ್ಮಿಕ್ಕುತ್ತಿದೆ. 293 ಮೀಟರ್ ಎತ್ತರದಿಂದ ಧುಮ್ಮಿಕ್ಕುವ ಜಲಪಾತ ಇದೀಗ ಬಿರು ಬೇಸಿಗೆಯಲ್ಲೂ ಪ್ರವಾಸಿಗರಿಗೆ ಕಾಣಸಿಗಲಿದೆ.

ಶರಾವತಿ ವಿದ್ಯುದಾಗಾರ ಬೆಂಕಿಗೆ ಆಹುತಿಯಾಗಿದ್ದು, ಜೋಗ ಮೈದುಂಬಿ ಧುಮ್ಮಿಕ್ಕಲು ಕಾರಣವಾಗಿದೆ. ವಿದ್ಯುದಾಗಾರ ದುರಸ್ತಿಯಾಗಲು ಕನಿಷ್ಠ 6 ತಿಂಗಳು ಬೇಕಾಗುತ್ತದೆ. ಅಲ್ಲಿಯವರೆಗೆ ಗೇರುಸೊಪ್ಪ ವಿದ್ಯುದಾಗಾರದಲ್ಲಿ ಗರಿಷ್ಠ ಮಟ್ಟದ ವಿದ್ಯುತ್ ಉತ್ಪಾದಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಜೋಗ ಜಲಪಾತದ ಮೂಲಕ ಗೇರುಸೊಪ್ಪ ವಿದ್ಯುದಾಗಾರಕ್ಕೆ ನೀರು ಹರಿಸುತ್ತಿರುವುದರಿಂದ ಬೇಸಿಗೆಯಲ್ಲೂ ಜೋಗಕ್ಕೆ ಜೀವಕಳೆ ಬಂದಿದೆ.

ಜೋಗ ಜಲಪಾತವನ್ನು ಸರ್ವಋತು ಜಲಪಾತವನ್ನಾಗಿಸುವ ನಿಟ್ಟಿನಲ್ಲಿ ಪ್ರಯತ್ನಗಳು ಆರಂಭಗೊಂಡಿದ್ದವು. ಈ ಬಾರಿ ಅನಿವಾರ್ಯವಾಗಿ ಜೋಗ ಸರ್ವಋತು ಜಲಪಾತವಾಗಿ ಮಾರ್ಪಟ್ಟಿದೆ. ಪ್ರಸ್ತುತ ಲಿಂಗನಮಕ್ಕಿ ಜಲಾಶಯದಿಂದ 3,000 ಕ್ಯುಸೆಕ್ ನೀರನ್ನು ತಲಕಳಲೆ ಬ್ಯಾಲೆನ್ಸಿಂಗ್ ಜಲಾಶಯದ ಮೂಲಕ ಗೇರುಸೊಪ್ಪ ವಿದ್ಯುದಾಗಾರಕ್ಕೆ ಹರಿಸಲಾಗುತ್ತಿದೆ.

ಇನ್ನೊಂದು ಸಾವಿರ ಕ್ಯೂಸೆಕ್ ನೀರು ಮಹಾತ್ಮಗಾಂಧಿ ವಿದ್ಯುದಾಗಾರದ ಕಡೆಗೆ ಹರಿಯುತ್ತಿದೆ. ಈ ಒಂದು ಸಾವಿರ ಕ್ಯೂಸೆಕ್ ನೀರಿನಲ್ಲಿ 600 ಕ್ಯುಸೆಕ್ ನೀರು, ಮಹಾತ್ಮಗಾಂಧಿ ವಿದ್ಯುದಾಗಾರದಲ್ಲಿ ವಿದ್ಯುತ್ ಉತ್ಪಾದನೆಗೆ ಬಳಸಲಾಗುತ್ತಿದೆ. ಇನ್ನುಳಿದ 400 ಕ್ಯುಸೆಕ್ ನೀರು ಶರಾವತಿ ನದಿ ಮೂಲಕ ಜೋಗ ಜಲಪಾತದಲ್ಲಿ ಧುಮುಕಿ ಗೇರುಸೊಪ್ಪ ವಿದ್ಯುದಾಗಾರ ತಲುಪುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT