ಪಿಲಿಕುಳ ನಿಸರ್ಗ ಧಾಮದ ಪ್ರವೇಶ ದ್ವಾರ 
ಪ್ರವಾಸ-ವಾಹನ

ರಾಜ್ಯದ ಅತಿದೊಡ್ಡ ಮೃಗಾಲಯಗಳಲ್ಲಿ ಒಂದಾಗಿರುವ ಪಿಲಿಕುಳ ಜೈವಿಕ ಉದ್ಯಾನವನ

ಕೆಲ ದಿನಗಳ ಹಿಂದೆ ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದ ಪ್ರಾಣಿಗಳ ಕುಟುಂಬಕ್ಕೆ...

ಮಂಗಳೂರು: ಕೆಲ ದಿನಗಳ ಹಿಂದೆ ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದ ಪ್ರಾಣಿಗಳ ಕುಟುಂಬಕ್ಕೆ 6 ವರ್ಷದ ಕಾವೇರಿ ಸೇರಿಕೊಂಡಾಗ ಅಲ್ಲಿ ಸಂಭ್ರಮ ಉಂಟಾಯಿತು. ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ಬಂದ ಕಾವೇರಿ ಎಂಬ ನೀರು ಕುದುರೆ(hippopotamus)ಯನ್ನು ನೀರಿಗೆ ಹಾಕಿದ್ದು, ಅದಕ್ಕಾಗಿ ಪ್ರತ್ಯೇಕ ನೀರಿನ  ನೀರಿನ ಕೇಂದ್ರವನ್ನು ಸೃಷ್ಟಿ ಮಾಡಲಾಗಿದೆ.
ಹಲವು ವೈವಿಧ್ಯ ಪ್ರಾಣಿ-ಪಕ್ಷಿಗಳಿಂದಾಗಿ ಇಂದು ಮಂಗಳೂರಿನ ಪಿಲಿಕುಳ ಮೃಗಾಲಯ ರಾಜ್ಯದಲ್ಲಿಯೇ ಪ್ರಮುಖವಾಗಿದೆ. 
ಪಶ್ಚಿಮ ಕರಾವಳಿ ಘಟ್ಟದ ತಪ್ಪಲಿನಲ್ಲಿರುವ ಪಿಲಿಕುಳಕ್ಕೆ ಆ ಹೆಸರು ಬರಲು ಕಾರಣ ತುಳು ಭಾಷೆಯಲ್ಲಿ ಪಿಲಿ ಎಂದರೆ ಹುಲಿ ಮತ್ತು ಕುಳ ಎಂದರೆ ಸರೋವರ ಎಂದರ್ಥ. ಇದರ ಉಸ್ತುವಾರಿ ನೋಡಿಕೊಳ್ಳುತ್ತಿರುವುದು ಪಿಲಿಕುಳ ನಿಸರ್ಗ ಧಾಮ ಸೊಸೈಟಿ. ಇದರ ಮುಖ್ಯ ಆದಾಯ ಸಿಎಸ್ಆರ್ ಪ್ರಾಯೋಜಕತ್ವ, ಗೇಟುಗಳಲ್ಲಿ ಹಣ ಸಂಗ್ರಹ ಮತ್ತು ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳುವುದಾಗಿದೆ. 
ನಮ್ಮ ಮೃಗಾಲಯ ಇಷ್ಟೊಂದು ಕೀರ್ತಿ ಬರಲು ದಕ್ಷಿಣ ಕನ್ನಡ ಜನತೆಯೇ ಕಾರಣ. ಜನರ ನಿರಂತರ ಸಹಕಾರ ನಮಗಿದೆ. ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಕೂಡ ಸಹಾಯ ಮಾಡುತ್ತಾರೆ ಎನ್ನುತ್ತಾರೆ ಶಾಸಕ ಜೆ.ಆರ್.ಲೊಬೊ. ಅವರು ನಿಸರ್ಗಧಾಮದ ಮೊದಲ ಕಾರ್ಯಕಾರಿ ನಿರ್ದೇಶಕರು ಮತ್ತು ಮಂಗಳೂರು ನಗರ ಪಾಲಿಕೆಯ ಅಂದಿನ ಆಯುಕ್ತರಾಗಿದ್ದಾರೆ.
ಪಿಲಿಕುಳದಲ್ಲಿ 1200 ಪ್ರಾಣಿಗಳು ಮತ್ತು 125 ವೈವಿಧ್ಯ ಪ್ರಬೇಧಗಳ ಪಕ್ಷಿಗಳು ಇವೆ. ಹುಲಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಇಲ್ಲಿನ ಎರಡು ಆನೆಗಳಾದ ದುರ್ಗಾಪರಮೇಶ್ವರಿ ಮತ್ತು ಪ್ರಶಾಂತ ಮೈಸೂರಿನ ದಸರಾ ಜಂಬೂ ಸವಾರಿಯಲ್ಲಿ ಪ್ರತಿವರ್ಷ ಭಾಗವಹಿಸುತ್ತವೆ. ಪಿಲಿಕುಳ ದೇಶದಲ್ಲಿಯೇ ಮೊದಲ ಕಿಂಗ್ ಕೋಬ್ರಾ ತಳಿಯ ಕೇಂದ್ರವಾಗಿದೆ. ವರ್ಷಕ್ಕೊಮ್ಮೆ ಶಾಲಾ ಮಕ್ಕಳಿಗೆ ವನ್ಯಮೃಗಗಳ ಕಾರ್ಯಕ್ರಮ ಏರ್ಪಡಿಸಲಾಗುತ್ತದೆ ಎನ್ನುತ್ತಾರೆ ಉದ್ಯಾನವನದ ನಿರ್ದೇಶಕ ಜಯಪ್ರಕಾಶ್ ಭಂಡಾರಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT