ಸಂಗ್ರಹ ಚಿತ್ರ 
ಪ್ರವಾಸ-ವಾಹನ

ನೆರೆ ಪರಿಸ್ಥಿತಿ ಹಿನ್ನೆಲೆ-ಆ.30ರವರೆಗೆ ಚಿಕ್ಕಮಗಳೂರು ಗಿರಿಧಾಮಗಳಿಗೆ ಪ್ರವಾಸಿಗರ ಭೇಟಿಗೆ ನಿಷೇಧ

ಈ ತಿಂಗಳ ಕೊನೆಯವರೆಗೆ ತಾಲ್ಲೂಕಿನ ಗಿರಿಧಾಮಗಳಿಗೆ ಪ್ರವಾಸಿ ವಾಹನಗಳ ಪ್ರವೇಶಕ್ಕೆ ಚಿಕ್ಕಮಗಳೂರು ಜಿಲ್ಲಾಡಳಿತ ನಿಷೇಧಿಸಿದೆ.  

ಚಿಕ್ಕಮಗಳೂರು: ಈ ತಿಂಗಳ ಕೊನೆಯವರೆಗೆ ತಾಲ್ಲೂಕಿನ ಗಿರಿಧಾಮಗಳಿಗೆ ಪ್ರವಾಸಿ ವಾಹನಗಳ ಪ್ರವೇಶಕ್ಕೆ ಚಿಕ್ಕಮಗಳೂರು ಜಿಲ್ಲಾಡಳಿತ ನಿಷೇಧಿಸಿದೆ.  

ಮುಳ್ಳಯ್ಯನಗಿರಿ, ಸೀತಲಾಯನಗಿರಿ ಮತ್ತು ಗುರು ದತ್ತಾತ್ರೇಯ ಬಾಬಾಬುಡನ್‍ ಸ್ವಾಮಿ  ದರ್ಗಾಕ್ಕೆ ಸಂಪರ್ಕಿಸುವ ಕೈಮರ ಚೆಕ್‍ಪೋಸ್ಟ್ ರಸ್ತೆಯಿಂದ ಪ್ರವಾಸಿ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ.

ಕಳೆದ ಐದು ದಿನಗಳಿಂದ  ಗಿರಿಧಾಮಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಪ್ರವಾಸಿ ವಾಹನಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿಯವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ. ರಸ್ತೆಯಲ್ಲಿ ಭೂಕುಸಿತ ಮತ್ತು ಮರಗಳು ಉರುಳಿ ಬಿದ್ದ ಘಟನೆಗಳು ನಡೆದಿವೆ. ಅರಣ್ಯ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್  ಸಲ್ಲಿಸಿದ ವರದಿಗಳನ್ನು ಪರಿಗಣಿಸಿ ಪ್ರವಾಸಿಗರ ಸುರಕ್ಷತೆಯ ಹಿತದೃಷ್ಟಿಯಿಂದ ನಿಷೇಧ  ಹೇರಲಾಗಿದೆ. 

ಚಿಕ್ಕಮಗಳೂರಿನ ಗಿರಿಧಾಮಗಳು ಮಳೆಗಾಲದಲ್ಲಿ ನೂರಾರು ಪ್ರವಾಸಿಗರನ್ನು ಆಕರ್ಷಿಸುತ್ತವೆ. ಭಾರಿ ಮಳೆ  ಮತ್ತು ಭೂಕುಸಿತದಿಂದಾಗಿ ಒಟ್ಟು 240 ಕೋಟಿ ರೂ. ನಷ್ಟ ಉಂಟಾಗಿದೆ. ಮೂಡಿಗೆರೆ ತಾಲ್ಲೂಕಿನಲ್ಲಿ  ವ್ಯಾಪಕ ಹಾನಿ ಸಂಭವಿಸಿದ್ದು, 140 ಕೋಟಿ ರೂ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. 

ಚಿಕ್ಕಮಗಳೂರು  ತಾಲ್ಲೂಕಿನಲ್ಲಿ 28 ಕೋಟಿ ರೂ, ಎನ್‌.ಆರ್. ಪುರದಲ್ಲಿ 16 ಕೋಟಿ ರೂ,  ಶೃಂಗೇರಿಯಲ್ಲಿ 20 ಕೋಟಿ, ಹಾಗೂ ಕೊಪ್ಪ ತಾಲ್ಲೂಕಿನಲ್ಲಿ 35 ಕೋಟಿ ರೂ. ನಷ್ಟ ಸಂಭವಿಸಿದೆ. 
   
ಭಾರಿ  ಮಳೆಯಿಂದಾಗಿ ಸುಮಾರು 950 ಕಿ.ಮೀ ರಸ್ತೆ ಹಾನಿಯಾಗಿದೆ. 159 ಸೇತುವೆಗಳು ಮತ್ತು 34  ಕೆರೆಗಳು ಸಹ ಹಾನಿಗೊಂಡಿವೆ. ಪ್ರಾಥಮಿಕ ಅಂದಾಜಿನಂತೆ 1,565 ಹೆಕ್ಟೇರ್  ಪ್ರದೇಶದಲ್ಲಿ ಬೆಳೆದು ನಿಂತಿದ್ದ ಬೆಳೆಗಳು ನಷ್ಟವಾಗಿವೆ. 
ಶಾಲೆಗಳು ಶುಕ್ರವಾರ ಮತ್ತೆ ತೆರೆಯಲಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಆದರೆ, ಪರಿಹಾರ ಕೇಂದ್ರಗಳಾಗಿ ಸ್ಥಾಪಿಸಿರುವ ಕೆಲ ಶಾಲೆಗಳು ಮುಚ್ಚಲ್ಪಟ್ಟಿರುತ್ತವೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT