ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಬೆಂಗಳೂರಿನ ವಿಕ್ಟೋರಿಯಾ ಮತ್ತು ವಾಣಿವಿಲಾಸ್ ಸಾರ್ವಜನಿಕ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ವೈದ್ಯಕೀಯ ಶಿಕ್ಷಣ ಸಚಿವ ಶರಣುಪ್ರಕಾಶ್ ಪಾಟೀಲ್ ಅವರೊಂದಿಗೆ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ, ಆಸ್ಪತ್ರೆಯ ಒಳರೋಗಿಗಳು, ಹೊರರೋಗಿಗಳು ಮತ್ತು ಅವರ ಸಹಾಯಕರೊಂದಿಗೆ ಮಾತಾಡಿದರು.
ಇದೇ ವೇಳೆ ರೋಗಿಗಳ ಜೊತೆ ವೈದ್ಯರು ಸಹಾನುಭೂತಿಯಿಂದ ವರ್ತಿಸಬೇಕು ಎಂದು ಸೂಚನೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.