ವಿಡಿಯೋ

Watch | ಭಯೋತ್ಪಾದನೆ ಹುಚ್ಚು ನಾಯಿಯಾಗಿದ್ದರೆ, ಪಾಕಿಸ್ತಾನ ಅದರ ಪೋಷಕ!

ಪಾಕಿಸ್ತಾನದ ವಿರುದ್ದ ಬೃಹತ್ ರಾಜತಾಂತ್ರಿಕ ದಾಳಿಗೆ ಮುಂದಾಗಿರುವ ಕೇಂದ್ರ ಸರ್ಕಾರ, ಹಲವು ಸದಸ್ಯರನ್ನು ಒಳಗೊಂಡ 7 ಸಂಸದರ ನೇತೃತ್ವದ ನಿಯೋಗಗಳನ್ನು ವಿದೇಶಗಳಿಗೆ ಕಳುಹಿಸಿದೆ.

ಇದರ ಭಾಗವಾಗಿ, ಜಪಾನ್‌ನಲ್ಲಿರುವ ಭಾರತೀಯ ಸಮುದಾಯ ಮತ್ತು ಸರ್ವಪಕ್ಷ ನಿಯೋಗದ ನಡುವೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ, ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ, "... ಭಾರತ ಎಂದಿಗೂ ತಲೆಬಾಗುವುದಿಲ್ಲ ಎಂಬ ಸಂದೇಶ ಮತ್ತು ಸತ್ಯವನ್ನು ಹಂಚಿಕೊಳ್ಳಲು ನಾವು ಇಲ್ಲಿದ್ದೇವೆ.

ನಾವು ಭಯಪಟ್ಟು ಮಂಡಿಯೂರುವುದಿಲ್ಲ. ನಾನು ವಿರೋಧ ಪಕ್ಷದಲ್ಲಿರುವ ರಾಜಕೀಯ ಪಕ್ಷಕ್ಕೆ ಸೇರಿದವನು.

ಪಾಕಿಸ್ತಾನಕ್ಕೆ ಅವರು ಅರ್ಥಮಾಡಿಕೊಳ್ಳುವ ಭಾಷೆಯಲ್ಲಿ ಪಾಠ ಕಲಿಸಬೇಕು ಎಂದು ನಾನು ಸಾರ್ವಜನಿಕವಾಗಿ ಹೇಳಿದ್ದೇನೆ.

ಭಯೋತ್ಪಾದನೆ ಹುಚ್ಚು ನಾಯಿಯಾಗಿದ್ದರೆ, ಪಾಕಿಸ್ತಾನ ಅದರ ಪೋಷಕ. ಈ ಪ್ರಾಣಿ ಪೋಷಕನನ್ನು ಎದುರಿಸಲು ನಾವು ಮೊದಲು ಜಗತ್ತನ್ನು ಒಟ್ಟುಗೂಡಿಸಬೇಕಾಗಿದೆ.

ಇಲ್ಲದಿದ್ದರೆ, ಈ ಕ್ರೂರ ಪೋಷಕರು ಹೆಚ್ಚಿನ ಹುಚ್ಚು ನಾಯಿಗಳನ್ನು ಸಂತಾನೋತ್ಪತ್ತಿ ಮಾಡಿ ಸಾಕುತ್ತವೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT