ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಾಗಲಕೋಟೆ ಉಪಚುನಾವಣೆಯ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿರುವ ಬಗ್ಗೆ ಸಚಿವ ಎಂ.ಬಿ. ಪಾಟೀಲ್ ಪ್ರತಿಕ್ರಿಯಿಸಿ ಇದೆಲ್ಲ ನಾಟಕ; ಅವರು ಮತ್ತೆ ಬಿಜೆಪಿಗೆ ಸೇರುತ್ತಾರೆ ಎಂದು ಹೇಳಿದರು.
ಬಾಗಲಕೋಟೆ ಉಪಚುನಾವಣೆಯ ಅಭ್ಯರ್ಥಿ ವೀರಭದ್ರಯ್ಯ ಚರಂತಿಮಠ ಪರ ಪ್ರಚಾರ ಮಾಡುವುದನ್ನು ಪ್ರಶ್ನಿಸಿದ ಕಾಂಗ್ರೆಸ್ ನಾಯಕರ ಬಗ್ಗೆ ಯತ್ನಾಳ್ ಪ್ರತಿಕ್ರಿಯಿಸಿದರು.
ನನ್ನನ್ನು ಪಕ್ಷದಿಂದ ಹೊರಹಾಕಿದವರ ಪರವಾಗಿ ನಾನು ಪ್ರಚಾರ ಮಾಡುತ್ತಿಲ್ಲ; ಒಂದು ಕುಟುಂಬಕ್ಕಾಗಿ ಜನರಿಗೆ ದ್ರೋಹ ಮಾಡಲು ಸಾಧ್ಯವಿಲ್ಲ ಎಂದು ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.