ನೀಟ್ ಅಕ್ರಮ ಖಂಡಿಸಿ ಜಂತರ್ ಮಂತರ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಪ್ರಕರಣ ರಾಜ್ಯಸಭೆಯಲ್ಲಿ ಗುರುವಾರವೂ ಪ್ರತಿಧ್ವನಿಸಿತು.
ಇದರ ಹೊಣೆಗಾರಿಕೆಯನ್ನು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಹೊರಬೇಕು ಎಂದು ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದರು.
ಪ್ರತಿಭಟನಾಕಾರರ ವಿರುದ್ಧ ಪೊಲೀಸ್ ಕ್ರಮದ ಬಗ್ಗೆ ಅಮಿತ್ ಶಾ ಅವರು ಸದನದಲ್ಲಿ ಉತ್ತರ ಕೊಡಬೇಕು ಎಂದು ಖರ್ಗೆ ಒತ್ತಾಯಿಸಿದರು.
ಅಲ್ಲದೆ ಸಭಾಪತಿ ಸಿ.ಪಿ. ರಾಧಾಕೃಷ್ಣನ್ ಅವರು, ಗೃಹ ಸಚಿವರಿಗೆ ನಿರ್ದೇಶನ ನೀಡಿ ಸದನಕ್ಕೆ ಕರೆಸಿ ಉತ್ತರ ಪಡೆಯುವಂತೆ ಮನವಿ ಮಾಡಿದರು. ವಿಡಿಯೋ ಇಲ್ಲಿದೆ ನೋಡಿ.