ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಭಾಷಣಕ್ಕೆ ಪದೇ ಪದೇ ಅಡ್ಡಿಪಡಿಸಿದ ಕಾರಣ ಸೋಮವಾರ ಲೋಕಸಭೆ ಕಲಾಪವನ್ನು ಹಲವು ಬಾರಿ ಮುಂದೂಡಲಾಯಿತು.
ರಾಹುಲ್ ಗಾಂಧಿ ಅಪ್ರಕಟಿತ ಪುಸ್ತಕದಿಂದ ಆಯ್ದ ಭಾಗವನ್ನು ಓದಲು ಪ್ರಾರಂಭಿಸಿದಾಗ ಗದ್ದಲ ಪ್ರಾರಂಭವಾಯಿತು.
ಪುಸ್ತಕದ ಕೆಲ ಭಾಗಗಳಲ್ಲಿ ರಾಜನಾಥ್ ಸಿಂಗ್ ಮತ್ತು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಉಲ್ಲೇಖಿಸಲಾಗಿದೆ ಎಂದು ರಾಹುಲ್ ಗಾಂಧಿ ಹೇಳಿದರು.
ಪುಸ್ತಕವನ್ನು ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಬರೆದಿದ್ದಾರೆ.
ರಾಹುಲ್ ಗಾಂಧಿ ಭಾಷಣ ಪ್ರಾರಂಭವಾದ ತಕ್ಷಣ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅದಕ್ಕೆ ಅಡ್ಡಿಪಡಿಸಿದರು. ವಿಡಿಯೋ ಇಲ್ಲಿದೆ ನೋಡಿ.