ಮಹಾರಾಷ್ಟ್ರದ ಮುಳುಂದ್ ನಲ್ಲಿ ಥಾಣೆಗೆ ತೆರಳುವ ಮಾರ್ಗಮಧ್ಯೆ ಶನಿವಾರ ಕಾಂಗ್ರೆಸ್ ಸಂಸದ ಮತ್ತು ಲೋಕಸಭಾ ಸದಸ್ಯ ರಾಹುಲ್ ಗಾಂಧಿಗೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ.
2014 ರಲ್ಲಿ ಆರ್ಎಸ್ಎಸ್ ಬಗ್ಗೆ ರಾಹುಲ್ ನೀಡಿದ್ದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಿವಂಡಿ ನ್ಯಾಯಾಲಯಕ್ಕೆ ಹಾಜರಾಗಲು ರಾಹುಲ್ ಗಾಂಧಿ ತೆರಳುತ್ತಿದ್ದರು.
ಬಿಜೆಪಿ ಕಾರ್ಯಕರ್ತರು ಮುಳುಂದ್ ಟೋಲ್ ಪ್ಲಾಜಾ ಬಳಿ ಅವರ ಬೆಂಗಾವಲು ಪಡೆಗೆ ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಿದರು.
ನವದೆಹಲಿಯಲ್ಲಿ ಶುಕ್ರವಾರ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯ ಸ್ಥಳಕ್ಕೆ ನುಗ್ಗಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದ್ದನ್ನು ಖಂಡಿಸಿ ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.