ಕೆಎಸ್ಸಿಎ ಹುಬ್ಬಳ್ಳಿ ಕ್ರಿಕೆಟ್ ಮೈದಾನದಲ್ಲಿ ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ ನಡುವಿನ 2025-26ರ ರಣಜಿ ಟ್ರೋಫಿ ಫೈನಲ್ ಪಂದ್ಯ ನಡೆಯುತ್ತಿದೆ.
ನಾಲ್ಕನೇ ದಿನದ ಆಟದ ಅಂತ್ಯದ ವೇಳೆಗೆ ಜಮ್ಮು ಮತ್ತು ಕಾಶ್ಮೀರ ಕರ್ನಾಟಕ ವಿರುದ್ಧ 477 ರನ್ಗಳ ಬೃಹತ್ ಮುನ್ನಡೆ ಸಾಧಿಸಿದೆ.
ಜಮ್ಮು ಕಾಶ್ಮೀರ ತಂಡ ಬೃಹತ್ ಮುನ್ನಡೆ ಸಾಧಿಸಿ ಚೊಚ್ಚಲ ರಣಜಿ ಪ್ರಶಸ್ತಿ ಗೆಲ್ಲುವ ಸನಿಹದಲ್ಲಿದೆ.
ಹೀಗಾಗಿ ತಂಡವನ್ನು ಚಿಯರ್ ಅಪ್ ಮಾಡಲು ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಜಮ್ಮು ಕಾಶ್ಮೀರದಿಂದ ಹುಬ್ಬಳ್ಳಿಗೆ ಬಂದಿದ್ದಾರೆ.
ಒಮರ್ ಅಬ್ದುಲ್ಲಾ ಶನಿವಾರ ಕೊನೆ ದಿನದ ಆಟವನ್ನು ವೀಕ್ಷಿಸಿ ತಂಡವನ್ನು ಪ್ರೋತ್ಸಾಹಿಸಿದರು. ವಿಡಿಯೋ ಇಲ್ಲಿದೆ ನೋಡಿ.