ವಿಜಯ ದಶಮಿಗೆ ಒಂದು ದಿನ ಚಡ್ಡಿ ಪ್ಯಾಂಟ್ ಹಾಕೋದು ಬಿಟ್ಟರೆ ಬಿಜೆಪಿಯ ಯಾವೊಬ್ಬ ನಾಯಕನ ಮಗನೂ ಆರ್.ಎಸ್.ಎಸ್ ನಲ್ಲಿ ಪೂರ್ಣ ಪ್ರಚಾರಕರಾಗಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ಇಷ್ಟು ದಿನ ನಾನು ಹೇಳ್ತಾ ಇದ್ದೆ. ಈಗ ಅವರೇ ಹೇಳ್ತಾ ಇದ್ದಾರಾ? ನಾನು ಮುಂಚೆ ಇಂದ ಇದೇ ಹೇಳ್ತಾ ಇದ್ದೀನಿ.
ಗೋಶಾಲೆಗೆ ಹೋಗಬೇಕು ಅನ್ನೋದು, ಧರ್ಮ ರಕ್ಷಣೆ, ಗೋ ರಕ್ಷಣೆಗೆ ಬಿಡೋದು ಬಡವರ ಮಕ್ಕಳನ್ನು ಮಾತ್ರ. ಇವರ ಮಕ್ಕಳ ಏನ್ ಮಾಡ್ತಾ ಇದ್ದಾರೆ.
ಒಬ್ಬ ಬಿಜೆಪಿ ಲೀಡರ್ ಮಗ RSS ನ ಪೂರ್ಣ ಪ್ರಚಾರಕರು ಇದ್ದರೆ ತೋರಿಸಿ ನೋಡೋಣ ಅಂತ ಸವಾಲು ಹಾಕಿದರು. ವಿಡಿಯೋ ಇಲ್ಲಿದೆ ನೋಡಿ.