ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಕೆ.ಆರ್.ಪೇಟೆಯಲ್ಲಿ ಮಾಜಿ ಸ್ಪೀಕರ್ ದಿ.ಕೃಷ್ಣರ 86ನೇ ಜನ್ಮದಿನದ ಅಂಗವಾಗಿ ಪ್ರತಿಷ್ಠಾನದಿಂದ ಆಯೋಜಿಸಿದ್ದ ಸಮಾರಂಭ ಉದ್ಘಾಟಿಸಿ ಸಿದ್ದರಾಮಯ್ಯ ಮಾತನಾಡಿದರು.
ರಾಜಕೀಯ ಕ್ಷೇತ್ರ ಇಂದು ಕಲುಷಿತಗೊಂಡಿರುವುದರಿಂದ 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದರೆ, ಸಕ್ರಿಯ ರಾಜಕಾರಣದಲ್ಲಿದ್ದು, ಜನರ ಕಷ್ಟ, ಸುಖಗಳಿಗೆ ಧ್ವನಿಯಾಗಿ ನಿಲ್ಲುತ್ತೇನೆ ಎಂದು ತಿಳಿಸಿದರು.
ಈಮಧ್ಯೆ, ರಾಜಕೀಯ ಭ್ರಷ್ಟಗೊಂಡಿದೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ನಾನು ಬೆಂಬಲಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.