ನಿರ್ಮಲಾ ಸೀತಾರಾಮನ್ ಅವರು ಭಾರತದ ಅತ್ಯಂತ ಯಶಸ್ವಿ ಹಣಕಾಸು ಸಚಿವರಲ್ಲಿ ಒಬ್ಬರಾಗಿದ್ದಾರೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಶ್ಲಾಘಿಸಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ಬಿಜೆಪಿಯ 'ವಿಕಸಿತ ಭಾರತ ಸಂಕಲ್ಪ ಸಮಾವೇಶ'ದಲ್ಲಿ ಸಂಸದ ತೇಜಸ್ವಿ ಸೂರ್ಯ ಮಾತನಾಡಿದರು.
ಬೆಂಗಳೂರಿನ ಗುರು ರಾಘವೇಂದ್ರ ಸಹಕಾರ ಸೊಸೈಟಿಯ ಸಮಸ್ಯೆಯಿದೆ, ನ್ಯಾಶನಲ್ ಕೋ ಆಪರೇಟಿವ್ ಬ್ಯಾಂಕ್ ಸಮಸ್ಯೆ ಬಂತು.
ನಿರ್ಮಲಾ ಸೀತಾರಾಮನ್ ಅವರು ರಾಷ್ಟ್ರೀಯ ಬ್ಯಾಂಕುಗಳ ಜೊತೆ ವಿಲೀನಗೊಳಿಸಿ 40-50 ಸಾವಿರ ಜನ ಠೇವಣಿದಾರರಿಗೆ ಸಹಾಯ ಮಾಡಿದರು.
ಗುರು ರಾಘವೇಂದ್ರ ಬ್ಯಾಂಕಿನ ಸಮಸ್ಯೆ ಬಗೆಹರಿದಿಲ್ಲ, ನಮ್ಮ ಕ್ಷೇತ್ರದಲ್ಲಿ 60 ಸಾವಿರಕ್ಕೂ ಹೆಚ್ಚು ಕುಟುಂಬಗಳ ಸಮಸ್ಯೆಯಿದೆ.
ಆ ಬ್ಯಾಂಕಿನ ಸಮಸ್ಯೆ ಆದಷ್ಟು ಶೀಘ್ರ ಬಗೆಹರಿಸಿಕೊಡಿ ಎಂದು ಸಚಿವೆಗೆ ಸಂಸದ ತೇಜಸ್ವಿ ಸೂರ್ಯ ಮನವಿ ಮಾಡಿಕೊಂಡರು. ವಿಡಿಯೋ ಇಲ್ಲಿದೆ ನೋಡಿ.