ತಮಿಳುನಾಡು ರಾಜಕೀಯ ಗೊಂದಲ ಕೊನೆಗೂ ಅಂತ್ಯವಾಗಿದ್ದು, ವಿಸಿಕೆ ಪಕ್ಷದ ಬೆಂಬಲದೊಂದಿಗೆ ನಟ ವಿಜಯ್ ಸರ್ಕಾರ ರಚನೆಗೆ ಇದ್ದ ತೊಡಕು ನಿವಾರಣೆಯಾಗಿದೆ.
ವಿದುತಲೈ ಚಿರುಥೈಗಳ್ ಕಚ್ಚಿ (ವಿಸಿಕೆ) ಶನಿವಾರ, ಮೇ 9ರಂದು ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ)ಗೆ ಬೆಂಬಲ ಘೋಷಿಸಿದೆ.
ವಿಧಾನಸಭೆಯ ತೀರ್ಪಿನ ಬಳಿಕ ತಮಿಳುನಾಡಿನಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗದಂತೆ ತಡೆಯುವುದು ಮತ್ತು ಜನರ ಜನಾದೇಶವನ್ನು ಕಾಪಾಡುವುದು ಈ ನಿರ್ಧಾರದ ಉದ್ದೇಶ ಎಂದು ಪಕ್ಷ ತಿಳಿಸಿದೆ.
ಅತ್ತ ನಟ ವಿಜಯ್ ಗೆ ತಮ್ಮ ಪಕ್ಷದ ಬೆಂಬಲ ಪತ್ರ ಹಸ್ತಾಂತರಿಸಿದ ಬೆನ್ನಲ್ಲೇ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ವಿಸಿಕೆ ಮುಖ್ಯಸ್ಥ ತೋಲ್ ತಿರುಮಾವಳವನ್ ಮಾತನಾಡಿದರು.
ಎಡಪಂಥೀಯ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಹಾಗೂ ಪಕ್ಷದ ಆತಂರಿಕ ಚರ್ಚೆಗಳ ನಂತರ ಟಿವಿಕೆಗೆ ಬಾಹ್ಯ ಬೆಂಬಲ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.