ಉದ್ಯೋಗಸ್ಥ ಮಹಿಳೆಗೆ ಪೂರಕ ವಾತಾವರಣ: ಸಿಕ್ಕಿಂ ಬೆಸ್ಟ್, ದೆಹಲಿ ಲಾಸ್ಟ್! 
ಮಹಿಳೆ-ಮನೆ-ಬದುಕು

ಉದ್ಯೋಗಸ್ಥ ಮಹಿಳೆಗೆ ಪೂರಕ ವಾತಾವರಣ: ಸಿಕ್ಕಿಂ ಬೆಸ್ಟ್, ದೆಹಲಿ ಲಾಸ್ಟ್!

ಉದ್ಯೋಗಸ್ಥ ಮಹಿಳೆಯರಿಗೆ ಅತ್ಯುತ್ತಮ ವಾತಾವರಣ ಕಲ್ಪಿಸುವಲ್ಲಿ ಈಶಾನ್ಯ ರಾಜ್ಯದ ಸಿಕ್ಕಿಂ ಮುಂಚೂಣಿಯಲ್ಲಿದ್ದರೆ, ರಾಷ್ಟ್ರ ರಾಜಧಾನಿ ನವದೆಹಲಿ ಅತ್ಯಂತ ಕಳಪೆ ಸಾಧನೆ ಹೊಂದಿದೆ.

ವಾಷಿಂಗ್ ಟನ್: ಉದ್ಯೋಗಸ್ಥ ಮಹಿಳೆಯರಿಗೆ ಅತ್ಯುತ್ತಮ ವಾತಾವರಣ ಕಲ್ಪಿಸುವಲ್ಲಿ ಈಶಾನ್ಯ ರಾಜ್ಯದ ಸಿಕ್ಕಿಂ ಮುಂಚೂಣಿಯಲ್ಲಿದ್ದರೆ, ರಾಷ್ಟ್ರ ರಾಜಧಾನಿ ನವದೆಹಲಿ ಅತ್ಯಂತ ಕಳಪೆ ಸಾಧನೆ ಹೊಂದಿದೆ.

ಅಮೆರಿಕ ಮೂಲದ ಚಿಂತಕರ ಚಾವಡಿಯಾಗಿರುವ ಅಂತಾರಾಷ್ಟ್ರೀಯ ಅಧ್ಯಯನ ಕೇಂದ್ರ(ಸಿಎಸ್ಐಎಸ್) ಹಾಗೂ ನಾಥನ್ ಅಸೋಸಿಯೇಟ್ಸ್ ಜಂಟಿಯಾಗಿ ನಡೆಸಿದ ಅಧ್ಯಯನ ಪ್ರಕಾರ, ಭಾರತದಲ್ಲಿ ದುಡಿಯುವ ಮಹಿಳೆಯರಿಗೆ ಪೂರಕ ವಾತಾವರಣ ಕಲ್ಪಿಸಿರುವ ರಾಜ್ಯಗಳ ಪಟ್ಟಿಯಲ್ಲಿ ಸಿಕ್ಕಿಂ ಮೊದಲ ಸ್ಥಾನ ಪಡೆದಿದೆ.

ಅಧ್ಯಯನ ವರದಿಯಲ್ಲಿ ಸಿಕ್ಕಿಂ ಗೆ 40 ಪಾಯಿಂಟ್ ರೇಟಿಂಗ್ ದೊರೆತಿದ್ದರೆ, ರಾಷ್ಟ್ರ ರಾಜಧಾನಿ ದೆಹಲಿಗೆ ಕೇವಲ 8.5 ರೇಟಿಂಗ್ ಪಾಯಿಂಟ್ ದೊರೆತಿದೆ. ಕೈಗಾರಿಕೆ, ಐಟಿ  ಉದ್ಯಮ ಕ್ಷೇತ್ರಗಳಲ್ಲಿ ಮಹಿಳೆಯರ ಕಾರ್ಯನಿರ್ವಹಿಸುವ  ಅವಧಿಗೆ ಸಂಬಂಧಿಸಿದ ಕಾನೂನು ನಿರ್ಬಂಧನೆಗಳು, ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ, ಕಿರುಕುಳ ಸೇರಿದಂತೆ ಕ್ರಿಮಿನಲ್ ಪ್ರಕರಣಗಳ ಬಗ್ಗೆ ರಾಜ್ಯದ ನ್ಯಾಯಾಂಗ ವ್ಯವಸ್ಥೆಯ ಸ್ಪಂದನೆ, ಒಟ್ಟಾರೆ ಉದ್ಯೋಗಸ್ಥರಲ್ಲಿ ಮಹಿಳೆಯರ ಶೇಕಡಾವಾರು ಸ್ಥಾನ. ಉದ್ಯೋಗದಲ್ಲಿ ಮಹಿಳೆಯರಿಗೆ ನಿಡಲಾಗುವ ಭಡ್ತಿ ಹಾಗೂ ಪ್ರೋತ್ಸಾಹಗಳ ಆಧಾರದ ಮೇಲೆ ಉದ್ಯೋಗಸ್ಥ ಮಹಿಳೆಯರಿಗೆ ಅತ್ಯುತ್ತಮ ವಾತಾವರಣ ಕಲ್ಪಿಸುವ ರಾಜ್ಯವನ್ನು ಆಯ್ಕೆ ಮಾಡಲಾಗಿದೆ.

ಅಧ್ಯಯನದಲ್ಲಿ ಸಿಕ್ಕಿಂ ಗೆ ಮೊದಲ ಸ್ಥಾನ ನಂತರ ತೆಲಂಗಾಣ (28.5 ಪಾಯಿಂಟ್),  ಪುದುಚೇರಿ(25.6 ಪಾಯಿಂಟ್), ಕರ್ನಾಟಕ (24.7 ಪಾಯಿಂಟ್), ಹಿಮಾಚಲ ಪ್ರದೇಶ(24.2 ಪಾಯಿಂಟ್), ಆಂಧ್ರ ಪ್ರದೇಶ (24.0 ಪಾಯಿಂಟ್), ಕೇರಳ (22.2 ಪಾಯಿಂಟ್),ಮಹಾರಾಷ್ಟ್ರ (21.4 ಪಾಯಿಂಟ್) , ತಮಿಳುನಾಡು (21.1), ಹಾಗೂ ಛತ್ತೀಸ್ ಗಢ(21.1) ರಾಜ್ಯಗಳು ಮೊದಲ ಹತ್ತು ಸ್ಥಾನಗಳನ್ನು ಪಡೆದಿವೆ.

ಸಿಕ್ಕಿಂ, ಕರ್ನಾಟಕ, ಆಂಧ್ರ ಪ್ರದೇಶ, ತಮಿಳು ನಾಡು ರಾಜ್ಯಗಳಲ್ಲಿ ಮಹಿಳೆಯರು ರಾತ್ರಿ ವೇಳೆ ಕಾರ್ಯನಿರ್ವಹಿಸುವುದಕ್ಕೆ ಇದ್ದ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ರಿಟೇಲ್ ಕ್ಷೇತ್ರದಲ್ಲಿ ರಾತ್ರಿ 10 ಗಂಟೆ ವರೆಗೆ ಮಾತ್ರ ಮಹಿಳೆಯರು ಕಾರ್ಯನಿರ್ವಹಿಸಬಹುದಾಗಿದೆ. 9 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಯಾವುದೇ ಕ್ಷೇತ್ರದಲ್ಲಿ ಮಹಿಳೆಯರು ರಾತ್ರಿ ವೇಳೆ ಕೆಲಸ ಮಾಡುವುದಕ್ಕೆ ಅವಕಾಶ ನೀಡುವುದಿಲ್ಲ  ಎಂದು ಅಧ್ಯಯನ ವರದಿ ತಿಳಿಸಿದೆ. ನ್ಯಾಯವಿತರಣೆ ವ್ಯವಸ್ಥೆ, ನಿರ್ಬಂಧಗಳ ಪರಿಣಾಮವಾಗಿ ರಾಷ್ಟ್ರ ರಾಜಧಾನಿ ನವದೆಹಲಿ ಕೊನೆಯ ಸ್ಥಾನ ಪಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ನಿರ್ಣಯಕ್ಕೆ ಒಪ್ಪಬೇಕು, ವರಿಷ್ಠರು ಹೇಳಿದಾಗ ದೆಹಲಿಗೆ ಹೋಗುವೆ: ಖರ್ಗೆ ಭೇಟಿ ಬಳಿಕ ಸಿದ್ದರಾಮಯ್ಯ ಪ್ರತಿಕ್ರಿಯೆ; ಡಿಕೆಶಿ ಆಪ್ತರ ನಡೆಗೆ CM ತೀವ್ರ ಅಸಮಾಧಾನ

ರಾಜ್ಯದಲ್ಲಿ ಯಾರೂ ನಿರೀಕ್ಷಿಸದಂತಹ "ಸ್ಫೋಟಕ" ರಾಜಕೀಯ ಬೆಳವಣಿಗೆ: ಕುಮಾರಸ್ವಾಮಿ ಭವಿಷ್ಯ

'ಸಿಎಂ ಕುರ್ಚಿ' ಕದನದ ನಡುವೆ ವರದಿಗಾರರ ಪ್ರಶ್ನೆಗೆ ಕೆರಳಿದ ಡಿಕೆಶಿ! ಹೇಳಿದ್ದೇನು?

ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿ: ನಾಯಕ ಯಾರು? ರಿಷಭ್ ಪಂತ್ ಅಥವಾ ಕೆಎಲ್ ರಾಹುಲ್! ನಾಳೆ ನಿರ್ಧಾರ

"ನಾವೂ ಕಲಿಯಬೇಕು": ಮಾಮ್ದಾನಿ-ಟ್ರಂಪ್ ಭೇಟಿಯ ಬಗ್ಗೆ ತರೂರ್ ಪೋಸ್ಟ್; ನೀವು ಹೇಳಿದ್ದು ಸರಿ ಆದರೆ ರಾಹುಲ್ ಗೆ ಇದೆಲ್ಲಾ ಅರ್ಥ ಆಗತ್ತಾ?: BJP

SCROLL FOR NEXT