ಪಾಕಿಸ್ತಾನ ಮಾಜಿ ಕ್ರಿಕೆಟಿಗ ವಾಸೀಂ ಅಕ್ರಂ (ಸಂಗ್ರಹ ಚಿತ್ರ) 
ವಿದೇಶ

ಮಾಜಿ ಕ್ರಿಕೆಟಿಗ ವಾಸೀಂ ಅಕ್ರಂ ಮೇಲೆ ಗುಂಡಿನ ದಾಳಿ

ಪಾಕಿಸ್ತಾನ ಮಾಜಿ ಕ್ರಿಕೆಟಿಗ ವಾಸೀಂ ಅಕ್ರಂ ಅವರ ಕಾರಿನ ಮೇಲೆ ಬಂದೂಕುಧಾರಿಯಿಂದ ಗುಂಡಿನ ದಾಳಿಯಾಗಿದ್ದು, ಸ್ವಲ್ಪದರದಲ್ಲೇ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದ ಬಳಿ ಬುಧವಾರ ನಡೆದಿದೆ...

ಕರಾಚಿ: ಪಾಕಿಸ್ತಾನ ಮಾಜಿ ಕ್ರಿಕೆಟಿಗ ವಾಸೀಂ ಅಕ್ರಂ ಅವರ ಕಾರಿನ ಮೇಲೆ ಬಂದೂಕುಧಾರಿಯಿಂದ ಗುಂಡಿನ ದಾಳಿಯಾಗಿದ್ದು, ಸ್ವಲ್ಪದರದಲ್ಲೇ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದ ಬಳಿ ಬುಧವಾರ ನಡೆದಿದೆ.

ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದ ಬಳಿ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಬೈಕಿನಿಂದ ಬಂದ ಅನಾಮಿಕ ವ್ಯಕ್ತಿಯೊಬ್ಬ ಇದ್ದಕ್ಕಿದ್ದಂತೆ ವಾಸೀಂ ಅಕ್ರಂ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ನಂತರ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಘಟನೆ ವೇಳೆ ವಾಸೀಂ ಅಕ್ರಂ ಅವರಿಗೆ ಯಾವುದೇ ಗಾಯಗಳಾಗಿಲ್ಲ. ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಕುರಿತಂತೆ ವಾಸೀಂ ಅಕ್ರಂ ಅವರು ಈಗಾಗಲೇ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಘಟನಾ ಸ್ಥಳದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಈ ಕುರಿತಂತೆ ಖಾಸಗಿ ಮಾಧ್ಯಮವೊಂದರಲ್ಲಿ ಮಾತನಾಡಿರುವ ವಾಸೀಂ ಅಕ್ರಂ ಅವರು, ಕರಾಚಿ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ವೇಗೀಯ ಬೌಲರ್ಸ್ ಗಳಿಗೆ ತರಬೇತಿ ನೀಡಲು ಶಿಬಿರವೊಂದನ್ನು ಏರ್ಪಡಿಸಲಾಗಿತ್ತು. ಹೀಗಾಗಿ ಕ್ರೀಡಾಂಗಣಕ್ಕೆ ಭೇಟಿ ನೀಡಲಾಗಿತ್ತು. ಈ ವೇಳೆ ಬೈಕಿನಲ್ಲಿ ಬಂದ ಅನಾಮಿಕ ವ್ಯಕ್ತಿಯೊಬ್ಬ ಇದ್ದಕ್ಕಿದ್ದಂತೆ ನನ್ನ ಕಾರಿನ ಮೇಲೆ ಗುಂಡಿನ ದಾಳಿ ನಡೆಸಲು ಪ್ರಾರಂಭಿಸಿದ, ನನಗೆ ಯಾರೂ ಈ ವರೆಗೂ ಯಾವುದೇ ರೀತಿಯ ಜೀವ ಬೆದರಿಕೆ ನೀಡಿಲ್ಲ. ಘಟನೆಯಲ್ಲಿ ಬೈಕಿನಲ್ಲಿ ಬಂದ ವ್ಯಕ್ತಿಯ ದ್ವಿಚಕ್ರ ವಾಹನದ ಸಂಖ್ಯೆಯನ್ನು ದಾಖಲು ಮಾಡಿಕೊಳ್ಳಲಾಗಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್: ನಾವು ಯುದ್ಧದಲ್ಲಿದ್ದೇವೆ; ಟ್ರಂಪ್ ಮಾರ್ಮಿಕ ನುಡಿ, ಸಂಘರ್ಷ ಮತ್ತಷ್ಟು ಉದ್ನಿಗ್ನ ಸಾಧ್ಯತೆ

Hubli Love jihad case: ವಿಡಿಯೋ ಇರೋದು ನಿಜ, ಆದ್ರೆ… ಪ್ರಜ್ಞೆ ತಪ್ಪಿದ್ದರೆ ವಿಡಿಯೋದಲ್ಲಿ ಹೇಗೆ ಆ್ಯಕ್ಟಿವ್ ಆಗಿರುತ್ತಾಳೆ?: Sameer Mulla ಸ್ಫೋಟಕ ಹೇಳಿಕೆ!

IPL 2026: Shreyas Iyer ಗೆ ಮತ್ತೆ ದಂಡ.. ನಾಯಕ ಮಾತ್ರವಲ್ಲ ಇಡೀ ಪಂಜಾಬ್ ತಂಡಕ್ಕೆ ಬರೆ ಹಾಕಿದ ಮ್ಯಾಚ್ ರೆಫರಿ!

'ಸಿಎಂ ಸಿದ್ದರಾಮಯ್ಯ ತಮ್ಮ ಮಗನನ್ನು ವಸೂಲಿ ಮಾಡಲು ರಾಜಕೀಯಕ್ಕೆ ಕರೆತಂದಿದ್ದಾರೆ': ಹೆಚ್ ಡಿ ಕುಮಾರಸ್ವಾಮಿ

Kerala: ಕಾಂಗ್ರೆಸ್ ಸಂಸದ Shashi Tharoor ಬೆಂಗಾವಲು ಪಡೆ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ

SCROLL FOR NEXT