ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಕಾಶ್ಮೀರ ಕಣಿವೆಯಲ್ಲಿ ಭದ್ರತೆಯಲ್ಲಿ ತೊಡಗಿರುವ ಭಾರತೀಯ ಯೋಧರು 
ವಿದೇಶ

ಭದ್ರತಾ ಸಲಹೆಗಾರರ ಮಟ್ಟದ ಮಾತುಕತೆಗೆ ಪಾಕ್ ಒಪ್ಪಿಗೆ

ಭಾರತ ಮತ್ತು ಪಾಕಿಸ್ತಾನ ಮಧ್ಯೆ ಈ ತಿಂಗಳ ಅಂತ್ಯಕ್ಕೆ ಭದ್ರತಾ ಸಲಹೆಗಾರರ ಮಟ್ಟದ ಮಾತುಕತೆಗೆ ಭಾರತ ನೀಡಿರುವ...

ಇಸ್ಲಾಮಾಬಾದ್ :ಭಾರತ ಮತ್ತು ಪಾಕಿಸ್ತಾನ ಮಧ್ಯೆ ಈ ತಿಂಗಳ ಅಂತ್ಯಕ್ಕೆ ಭದ್ರತಾ ಸಲಹೆಗಾರರ ಮಟ್ಟದ ಮಾತುಕತೆಗೆ ಭಾರತ ನೀಡಿರುವ ಆಹ್ವಾನವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ.

ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಶರೀಫ್ ಅವರ ರಾಷ್ಟ್ರೀಯ ಭದ್ರತಾ ಸಲಹೆಗಾರ ಸರ್ತಾಜ್ ಅಜೀಜ್, ಅವರು ಭಾರತಕ್ಕೆ ಈ ತಿಂಗಳ 23ಕ್ಕೆ ಆಗಮಿಸಲಿದ್ದಾರೆ.ತಮ್ಮ ಈ  ಭೇಟಿ ಮಹತ್ವದ್ದಾಗಿದ್ದು, ಎರಡೂ ದೇಶಗಳ ನಡುವಣ ಪ್ರಮುಖ ವಿವಾದಗಳನ್ನು ಬಗೆಹರಿಸಲು ಸಹಾಯವಾಗಬಹುದು ಎಂದು ಅವರು ಆಶಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ರಷ್ಯಾ ಸಮಿತ್ ನಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಭದ್ರತಾ ಸಲಹೆಗಾರರ ಮಟ್ಟದ ಮಾತುಕತೆ ನಡೆಸುವಂತೆ ಸಲಹೆ ನೀಡಿದ್ದರು. ಗಡಿ ಭಾಗದಲ್ಲಿ ಭಯೋತ್ಪಾದನೆಯನ್ನು ನಿಗ್ರಹಿಸುವುದು ಸಭೆಯಲ್ಲಿ ಚರ್ಚೆಗೊಳ್ಳುವ ವಿಷಯಗಳಲ್ಲಿ ಪ್ರಮುಖವಾಗಿದೆ.

ಭಾರತ ಮತ್ತು ಪಾಕಿಸ್ತಾನ ನಡುವಣ ಹಗೆತನ ಸುಮಾರು ಏಳು ದಶಕದ್ದು. ಗಡಿ ನಿಯಂತ್ರಣ ರೇಖೆಯಲ್ಲಿ ಪದೇ ಪದೇ ಯುದ್ಧ  ನಡೆಯುವುದು, ಭಯೋತ್ಪಾದನೆ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಂದಿನಿಂದ ಇನ್ನೂ ಜಾಸ್ತಿಯಾಗಿದೆ. 

ಈ ಮಧ್ಯೆ ಸ್ವಾತಂತ್ರ್ಯೋತ್ಸವಕ್ಕೆ ಇನ್ನೆರಡು ದಿನ ಬಾರಿ ಇರುವಾಗಲೇ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾಶ್ಮೀರ ಕಣಿವೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಾಯಕತ್ವ ಬದಲಾವಣೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಗರಂ; ನಾಯಕರಿಗೆ ಖಡಕ್ ಸಂದೇಶ

ಡಿ.26ರಿಂದ ರೈಲ್ವೆ ಪ್ರಯಾಣ ದರ ಏರಿಕೆ; 500 ಕಿ.ಮೀವರೆಗಿನ ಪ್ರಯಾಣಕ್ಕೆ ನಾನ್ ಎಸಿ ರೈಲುಗಳಲ್ಲಿ 10 ರೂ. ಹೆಚ್ಚಳ!

U-19 Asia Cup ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ಹೀನಾಯ ಸೋಲು!

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿ ನೇತೃತ್ವದ ಮಹಾಯುತಿ ಮ್ಯಾಜಿಕ್; ಅಘಾಡಿ ಗಾಡಿ ಪಂಕ್ಚರ್!

Pakistan: 17 ವರ್ಷ ಜೈಲು ಶಿಕ್ಷೆ ಹಿನ್ನೆಲೆ, ದೇಶಾದ್ಯಂತ ಬೀದಿಗಿಳಿದು ಹೋರಾಟಕ್ಕೆ ಸಜ್ಜಾಗಿ, ಇಮ್ರಾನ್ ಖಾನ್ ಕರೆ!

SCROLL FOR NEXT