ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಕಾಶ್ಮೀರ ಕಣಿವೆಯಲ್ಲಿ ಭದ್ರತೆಯಲ್ಲಿ ತೊಡಗಿರುವ ಭಾರತೀಯ ಯೋಧರು 
ವಿದೇಶ

ಭದ್ರತಾ ಸಲಹೆಗಾರರ ಮಟ್ಟದ ಮಾತುಕತೆಗೆ ಪಾಕ್ ಒಪ್ಪಿಗೆ

ಭಾರತ ಮತ್ತು ಪಾಕಿಸ್ತಾನ ಮಧ್ಯೆ ಈ ತಿಂಗಳ ಅಂತ್ಯಕ್ಕೆ ಭದ್ರತಾ ಸಲಹೆಗಾರರ ಮಟ್ಟದ ಮಾತುಕತೆಗೆ ಭಾರತ ನೀಡಿರುವ...

ಇಸ್ಲಾಮಾಬಾದ್ :ಭಾರತ ಮತ್ತು ಪಾಕಿಸ್ತಾನ ಮಧ್ಯೆ ಈ ತಿಂಗಳ ಅಂತ್ಯಕ್ಕೆ ಭದ್ರತಾ ಸಲಹೆಗಾರರ ಮಟ್ಟದ ಮಾತುಕತೆಗೆ ಭಾರತ ನೀಡಿರುವ ಆಹ್ವಾನವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ.

ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಶರೀಫ್ ಅವರ ರಾಷ್ಟ್ರೀಯ ಭದ್ರತಾ ಸಲಹೆಗಾರ ಸರ್ತಾಜ್ ಅಜೀಜ್, ಅವರು ಭಾರತಕ್ಕೆ ಈ ತಿಂಗಳ 23ಕ್ಕೆ ಆಗಮಿಸಲಿದ್ದಾರೆ.ತಮ್ಮ ಈ  ಭೇಟಿ ಮಹತ್ವದ್ದಾಗಿದ್ದು, ಎರಡೂ ದೇಶಗಳ ನಡುವಣ ಪ್ರಮುಖ ವಿವಾದಗಳನ್ನು ಬಗೆಹರಿಸಲು ಸಹಾಯವಾಗಬಹುದು ಎಂದು ಅವರು ಆಶಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ರಷ್ಯಾ ಸಮಿತ್ ನಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಭದ್ರತಾ ಸಲಹೆಗಾರರ ಮಟ್ಟದ ಮಾತುಕತೆ ನಡೆಸುವಂತೆ ಸಲಹೆ ನೀಡಿದ್ದರು. ಗಡಿ ಭಾಗದಲ್ಲಿ ಭಯೋತ್ಪಾದನೆಯನ್ನು ನಿಗ್ರಹಿಸುವುದು ಸಭೆಯಲ್ಲಿ ಚರ್ಚೆಗೊಳ್ಳುವ ವಿಷಯಗಳಲ್ಲಿ ಪ್ರಮುಖವಾಗಿದೆ.

ಭಾರತ ಮತ್ತು ಪಾಕಿಸ್ತಾನ ನಡುವಣ ಹಗೆತನ ಸುಮಾರು ಏಳು ದಶಕದ್ದು. ಗಡಿ ನಿಯಂತ್ರಣ ರೇಖೆಯಲ್ಲಿ ಪದೇ ಪದೇ ಯುದ್ಧ  ನಡೆಯುವುದು, ಭಯೋತ್ಪಾದನೆ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಂದಿನಿಂದ ಇನ್ನೂ ಜಾಸ್ತಿಯಾಗಿದೆ. 

ಈ ಮಧ್ಯೆ ಸ್ವಾತಂತ್ರ್ಯೋತ್ಸವಕ್ಕೆ ಇನ್ನೆರಡು ದಿನ ಬಾರಿ ಇರುವಾಗಲೇ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾಶ್ಮೀರ ಕಣಿವೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಯೋತ್ಪಾದನೆ ಬಗ್ಗೆ ಭಾರತ ಯಾವುದೇ ದ್ವಿಮುಖ ನೀತಿಯನ್ನು ಹೊಂದಿಲ್ಲ, ರಾಜಿಯ ಪ್ರಶ್ನೆಯೇ ಇಲ್ಲ: ಪ್ರಧಾನಿ ಮೋದಿ-Video

ಆಪ್ತ ಮಿತ್ರನಿಗೆ ಕೈ ಕೊಟ್ಟ ಭಾರತ?; ಅಮೆರಿಕಾ ಹೇಳಿದ್ದೇ ನಿಜವಾಯ್ತಾ?

ಡಿ-ಕೋಡ್: ಕಂಬಳಿ ಹುಳದಿಂದ ಚಿಟ್ಟೆಯಾಗುವ ಕಡೆಗೆ 'ಬಿಜೆಪಿ' ರೂಪಾಂತರ

ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಎಂಜಿಆರ್ ಅವರ ದೊಡ್ಡ ಅಭಿಮಾನಿ- ಮೋದಿ

300ಕ್ಕೂ ಹೆಚ್ಚು ಪತ್ರಕರ್ತರ ಉದ್ಯೋಗಕ್ಕೆ ಕತ್ತರಿ: ಆಕ್ರೋಶ ಬೆನ್ನಲ್ಲೇ 'The Washington Post' CEO ವಿಲ್ ಲೂಯಿಸ್ ರಾಜೀನಾಮೆ

SCROLL FOR NEXT