ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಕಾಶ್ಮೀರ ಕಣಿವೆಯಲ್ಲಿ ಭದ್ರತೆಯಲ್ಲಿ ತೊಡಗಿರುವ ಭಾರತೀಯ ಯೋಧರು 
ವಿದೇಶ

ಭದ್ರತಾ ಸಲಹೆಗಾರರ ಮಟ್ಟದ ಮಾತುಕತೆಗೆ ಪಾಕ್ ಒಪ್ಪಿಗೆ

ಭಾರತ ಮತ್ತು ಪಾಕಿಸ್ತಾನ ಮಧ್ಯೆ ಈ ತಿಂಗಳ ಅಂತ್ಯಕ್ಕೆ ಭದ್ರತಾ ಸಲಹೆಗಾರರ ಮಟ್ಟದ ಮಾತುಕತೆಗೆ ಭಾರತ ನೀಡಿರುವ...

ಇಸ್ಲಾಮಾಬಾದ್ :ಭಾರತ ಮತ್ತು ಪಾಕಿಸ್ತಾನ ಮಧ್ಯೆ ಈ ತಿಂಗಳ ಅಂತ್ಯಕ್ಕೆ ಭದ್ರತಾ ಸಲಹೆಗಾರರ ಮಟ್ಟದ ಮಾತುಕತೆಗೆ ಭಾರತ ನೀಡಿರುವ ಆಹ್ವಾನವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ.

ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಶರೀಫ್ ಅವರ ರಾಷ್ಟ್ರೀಯ ಭದ್ರತಾ ಸಲಹೆಗಾರ ಸರ್ತಾಜ್ ಅಜೀಜ್, ಅವರು ಭಾರತಕ್ಕೆ ಈ ತಿಂಗಳ 23ಕ್ಕೆ ಆಗಮಿಸಲಿದ್ದಾರೆ.ತಮ್ಮ ಈ  ಭೇಟಿ ಮಹತ್ವದ್ದಾಗಿದ್ದು, ಎರಡೂ ದೇಶಗಳ ನಡುವಣ ಪ್ರಮುಖ ವಿವಾದಗಳನ್ನು ಬಗೆಹರಿಸಲು ಸಹಾಯವಾಗಬಹುದು ಎಂದು ಅವರು ಆಶಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ರಷ್ಯಾ ಸಮಿತ್ ನಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಭದ್ರತಾ ಸಲಹೆಗಾರರ ಮಟ್ಟದ ಮಾತುಕತೆ ನಡೆಸುವಂತೆ ಸಲಹೆ ನೀಡಿದ್ದರು. ಗಡಿ ಭಾಗದಲ್ಲಿ ಭಯೋತ್ಪಾದನೆಯನ್ನು ನಿಗ್ರಹಿಸುವುದು ಸಭೆಯಲ್ಲಿ ಚರ್ಚೆಗೊಳ್ಳುವ ವಿಷಯಗಳಲ್ಲಿ ಪ್ರಮುಖವಾಗಿದೆ.

ಭಾರತ ಮತ್ತು ಪಾಕಿಸ್ತಾನ ನಡುವಣ ಹಗೆತನ ಸುಮಾರು ಏಳು ದಶಕದ್ದು. ಗಡಿ ನಿಯಂತ್ರಣ ರೇಖೆಯಲ್ಲಿ ಪದೇ ಪದೇ ಯುದ್ಧ  ನಡೆಯುವುದು, ಭಯೋತ್ಪಾದನೆ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಂದಿನಿಂದ ಇನ್ನೂ ಜಾಸ್ತಿಯಾಗಿದೆ. 

ಈ ಮಧ್ಯೆ ಸ್ವಾತಂತ್ರ್ಯೋತ್ಸವಕ್ಕೆ ಇನ್ನೆರಡು ದಿನ ಬಾರಿ ಇರುವಾಗಲೇ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾಶ್ಮೀರ ಕಣಿವೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

Toxic: ಯಶ್ ಜೊತೆಗೆ ಕಿಯಾರಾ ಬೋಲ್ಡ್ ಅವತಾರ, ಟ್ರೋಲರ್ ಗಳ ಬಾಯಿ ಮುಚ್ಚಿಸಿದ ಪತಿ ಸಿದ್ಧಾರ್ಥ್ ಮಲ್ಹೋತ್ರಾ!