ಸುನ್ಹಕ್ ಪ್ರಶಸ್ತಿ ವಿಜೇತ ಭಾರತೀಯ ವಿಜ್ಞಾನಿ ಹಾಗೂ ದ್ವೀಪ ರಾಷ್ಟ್ರದ ಅಧ್ಯಕ್ಷ 
ವಿದೇಶ

ಭಾರತೀಯ ವಿಜ್ಞಾನಿಗೆ ಮೊದಲ ಸುನ್ಹಕ್ ಶಾಂತಿ ಪ್ರಶಸ್ತಿ

ಭಾರತದಲ್ಲಿ ಜಲಚರ ಸಾಕಣೆ ವಿಷಯದಲ್ಲಿ ಅಗ್ರಗಣ್ಯರಾಗಿರುವ ಕೃಷಿ ವಿಜ್ಞಾನಿ ಡಾ. ಮೊದಡಗು ವಿಜಯ್ ಗುಪ್ತ ಅವರಿಗೆ ಸುನ್ಹಕ್ ಶಾಂತಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಸಿಯೋಲ್: ಭಾರತದಲ್ಲಿ ಜಲಚರ ಸಾಕಣೆ ವಿಷಯದಲ್ಲಿ ಅಗ್ರಗಣ್ಯರಾಗಿರುವ ಕೃಷಿ ವಿಜ್ಞಾನಿ ಡಾ. ಮೊದಡಗು ವಿಜಯ್ ಗುಪ್ತ ಅವರಿಗೆ ಸುನ್ಹಕ್  ಶಾಂತಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಸುನ್ಹಕ್ ಪ್ರಶಸ್ತಿಯನ್ನು ಇದೇ ಮೊದಲ ಬಾರಿಗೆ ನೀಡಲಾಗುತ್ತಿದ್ದು, ಭಾರತೀಯ ವಿಜ್ಞಾನಿ ಈ ಪ್ರಶಸ್ತಿಯನ್ನು ಪಡೆದ ಮೊದಲಿಗ ಎಂಬ ಹೆಗ್ಗಳಿಕೆಗೆ ವಿಜಯ್ ಗುಪ್ತ ಪಾತ್ರರಾಗಿದ್ದಾರೆ. ಭಾರತೀಯ ವಿಜ್ಞಾನಿಯೊಂದಿಗೆ ಕಿರಿಬಾಟಿ ದ್ವೀಪ ರಾಷ್ಟ್ರದ ಅಧ್ಯಕ್ಷ ಆಂಟೋ ಟಾಂಗ್ ಸಹ ಸುನ್ಹಕ್ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.

ಸಿಯೋಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಬ್ಬರೂ ಪ್ರಶಸ್ತಿ ವಿಜೇತರಿಗೆ ಸುನ್ಹಕ್ ಪ್ರಶಸ್ತಿಯೊಂದಿಗೆ ಒಂದು ಮಿಲಿಯನ್ ಡಾಲರ್ ನ್ನೂ ನೀಡಿ ಗೌರವಿಸಲಾಗಿದೆ. ಕಾರ್ಯಕ್ರಮದಲ್ಲಿ ವಿಶ್ವದ ಅನೇಕ ಗಣ್ಯರು ಉಪಸ್ಥಿತರಿದ್ದರು. ಜಲಚರ ಸಾಕಣೆ ವಿಷಯದಲ್ಲಿ ಬಾಂಗ್ಲಾದೇಶ ಹಾಗು ಹಲವು ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ  ಮಾಡಿರುವ ಮಹತ್ವದ ಸಂಶೋಧನೆಯನ್ನು ಗುರುತಿಸಿ ಡಾ.ಎಂ ವಿಜಯ್ ಗುಪ್ತ ಅವರಿಗೆ ಸುನ್ಹಕ್  ಶಾಂತಿ ಪ್ರಶಸ್ತಿಯನ್ನು ನೀಡಲಾಗಿದೆ.

ಸಣ್ಣ ದ್ವೀಪ ರಾಷ್ಟ್ರಗಳಿಗೆ ಮಾರಕವಾಗಿ ಪರಿಣಮಿಸಿರುವ ಕಾರ್ಬನ್ ಎಮಿಷನ್(ಇಂಗಾಲದ ಹೊರಸೂಸುವಿಕೆ) ವಿರುದ್ಧ ಹೋರಾಡಿದ್ದನ್ನು ಗುರುತಿಸಿ ಕಿರಿಬಾಟಿ ದ್ವೀಪದ ಅಧ್ಯಕ್ಷ ಆಂಟೋ ಟಾಂಗ್ ಅವರಿಗೂ ಪ್ರಶಸ್ತಿಯನ್ನು ಗುರುತಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT