ಸ್ಯಾನ್ ಬರ್ನಾರ್ಡಿನೋ ಶೂಟೌಟ್: ಶೋಧನೆ ನಡೆಸುತ್ತಿರುವ ಪೊಲೀಸರು 
ವಿದೇಶ

ಕ್ಯಾಲಿಫೋರ್ನಿಯಾ ಶೂಟೌಟ್ ಶಂಕಿತನ ಗುರುತು ಹಚ್ಚಿದ ಪೊಲೀಸರು; ಭಯೋತ್ಪಾದನೆ ಶಂಕೆ

ಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ನಡೆದ ಶೂಟೌಟ್ ನಲ್ಲಿ ೧೪ ಜನರನ್ನು ಹತ್ಯೆ ಮಾಡಿದ ಇಬ್ಬರು ಶಂಕಿತರಲ್ಲಿ ಒಬ್ಬನ ಗುರುತನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು

ಲಾಸೇಂಜಲೀಸ್: ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ನಡೆದ ಶೂಟೌಟ್ ನಲ್ಲಿ ೧೪ ಜನರನ್ನು ಹತ್ಯೆ ಮಾಡಿದ ಇಬ್ಬರು ಶಂಕಿತರಲ್ಲಿ ಒಬ್ಬನ ಗುರುತನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ಸಿ ಎನ್ ಎನ್ ವರದಿ ಮಾಡಿದೆ.

ಇಬ್ಬರು ಶಂಕಿರನ್ನು ಪೊಲೀಸರು ಹತ್ಯೆಗೈದಿದ್ದಾರೆ. ಅವರಲ್ಲಿ ಒಬ್ಬನನ್ನು ಸಯ್ಯದ್  ಫಾರುಕ್ ಎಂದು ಗುರುತಿಸಲಾಗಿದ್ದು ಅವನನ್ನು ಮತ್ತು ಅವನ ಪತ್ನಿಯನ್ನು ಕುಟುಂಬ ವರ್ಗ ಬುಧವಾರದ ಬೆಳಗ್ಗೆಯಿಂದ ಪತ್ತೆ ಹಚ್ಚಲು ಪ್ರಯತ್ನಿಸುತ್ತಿತ್ತು ಎಂದು ತಿಳಿದುಬಂದಿದೆ.

ಸ್ಯಾನ್ ಬರ್ನಾರ್ಡಿನೊ ನಗರದಲ್ಲಿ ಬುಧವಾರ ಬೆಳಗ್ಗೆ ಶಂಕಿತ ಪುರುಷ ಮತ್ತು ಮಹಿಳೆ ನಡೆಸಿದ ಗುಂಡಿನ ದಾಳಿಗೆ ೧೪ ಜನ ಮೃತಪಟ್ಟು ೧೭ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ನಂತರ ಪೊಲೀಸರೊಂದಿಗಿನ ಗುಂಡಿನ ಕಾಳಗದಲ್ಲಿ ಶಂಕಿತರು ಮೃತಪಟ್ಟಿದ್ದರು.

ಇದಕ್ಕೆ ಕಾರಣ ಇನ್ನು ತಿಳಿದುಬಂದಿಲ್ಲ. ಇದು ಭಯೋತ್ಪಾದಕ ಕೃತ್ಯವೋ ಅಥವಾ ಅಮೆರಿಕಾದಲ್ಲಿ ಹೆಚ್ಚುತ್ತಿರುವ ಗನ್ ಸಂಸ್ಕೃತಿಯ ದುಷ್ಪರಿಣಾಮವೋ ಎಂಬುದು ತಿಳಿದುಬಂದಿಲ್ಲ. "ಇಂತಹ ಘಟನೆಗಳು ಸಂಭವಿಸಿದಾಗ ದೊಡ್ಡ ಪ್ರಶ್ನೆ ಏಳುತ್ತದೆ. ಇದು ಭಯೋತ್ಪಾದಕ ಕೃತ್ಯವೇ? ಎಂಬುದು. ಇದನ್ನು ಸದ್ಯಕ್ಕೆ ಧೃಢೀಕರಿಸಲು ಸಾಧ್ಯವಿಲ್ಲ" ಎಂದು ಎಫ್ ಬಿ ಐ ಅಧಿಕಾರಿ ಡೇವಿಡ್ ಬೌಡಿಚ್ ವರದಿಗಾರರಿಗೆ ತಿಳಿಸಿದ್ದಾರೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

'ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯನಾಗಿರುತ್ತೇನೆ': ಸಿದ್ದರಾಮಯ್ಯ

ರಾಜ್ಯದ ಮುಂದಿನ CM ಆಗಲು ಕಾಂಗ್ರೆಸ್ ಟ್ರಬಲ್ ಶೂಟರ್ ರೆಡಿ: ಯಾರಿದು ಡಿಕೆ ಶಿವಕುಮಾರ್? ರಾಜಕೀಯವಾಗಿ ಬೆಳೆದುಬಂದದ್ದು ಹೇಗೆ?

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

SCROLL FOR NEXT